
ಮುಂಬೈ(ಆ.21): ಸ್ವಾತಂತ್ರ್ಯ ಸಂಗ್ರಾಮಕ್ಕೆ ಜನರನ್ನು ಒಂದೆಡೆ ಸೇರಿಸಿ ಉತ್ತೇಜನ ನೀಡಲೆಂದು ಸಾರ್ವಜನಿಕ ಗಣೇಶೋತ್ಸವವನ್ನು ಬಾಲ ಗಂಗಾಧರ ತಿಲಕರು ಆರಂಭಿಸಿರುವುದು ಎಲ್ಲರಿಗೂ ಗೊತ್ತಿರುವ ವಿಚಾರವೇ ಸರಿ. ಈ ಐತಿಹಾಸಿಕ ಸಾರ್ವಜನಿಕ ಗಣೇಶೋತ್ಸವಕ್ಕೆ 125 ವರ್ಷ ತುಂಬಲಿದೆ.
ಈ ಸಲದ ಗಣೇಶೋತ್ಸವ ಆಗಸ್ಟ್ 25ರಿಂದ ಸೆಪ್ಟೆಂಬರ್ 5ರವರೆಗೆ ಮುಂಬೈನಲ್ಲಿ ನೆರವೇರಲಿದೆ. ಇದೇ ಮುಂಬೈನ ಗಿರಗಾಂವ್'ನಲ್ಲಿರುವ ಖಾಡಿಲ್ಕರ್ ರಸ್ತೆಯ ಕೇಶವಜಿ ನಾಯಕ್ ಚಾಳ್'ನಲ್ಲಿ ಬಾಲಗಂಗಾಧರ ತಿಲಕರು 1894ರಲ್ಲಿ ಮೊತ್ತಮೊದಲ ಸಾರ್ವಜನಿಕ ಗಣೇಶೋತ್ಸವ ಆರಂಭಿಸಿದ್ದರು.ಆಗ ಒಂದು ಭಾಗದಲ್ಲಿ ಆರಂಭವಾಗಿದ್ದ ಸಾರ್ವಜನಿಕ ಗಣೇಶೋತ್ಸವ ಇಂದು 11 ಸಾವಿರ ಗಣೇಶ ಮಂಡಳಗಳಲ್ಲಿ ನಡೆಯುತ್ತಿದೆ.
ಈ ಉತ್ಸವದ ಒಟ್ಟಾರೆ ಮೌಲ್ಯ 1,000 ಕೋಟಿ ರು.ನಿಂದ 1,200 ಕೋಟಿ ರು. ಮೌಲ್ಯದ್ದಾಗಲಿದೆ. ಈ ಶುಭ ಸಂದರ್ಭದಲ್ಲಿ ಬೃಹನ್ಮುಂಬೈ ಸಾರ್ವಜನಿಕ ಗಣೇಶೋತ್ಸವ ಸಮನ್ವಯ ಸಮಿತಿಯು 125ನೇ ಸಾರ್ವಜನಿಕ ಗಣೇಶೋತ್ಸವವನ್ನು ಸಂಭ್ರಮದಿಂದ ಆಚರಿಸಲು ಸಿದ್ಧತೆ ಮಾಡಿಕೊಳ್ಳುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.