ಕಿತ್ತೂರು ಕರ್ನಾಟಕವಾಗುತ್ತಾ ಮುಂಬೈ ಕರ್ನಾಟಕ?

Published : Sep 07, 2019, 11:09 AM IST
ಕಿತ್ತೂರು ಕರ್ನಾಟಕವಾಗುತ್ತಾ ಮುಂಬೈ ಕರ್ನಾಟಕ?

ಸಾರಾಂಶ

ಹೈ-ಕ ಇನ್ನು ಕಲ್ಯಾಣ ಕರ್ನಾಟಕ| ಹೆಸರು ಬದಲಿಸಲು ಸಚಿವ ಸಂಪುಟ ಸಭೆ ನಿರ್ಧಾರ| ಈಡೇರಿದ ಹೈ-ಕ ಜನರ ಬಹುವರ್ಷಗಳ ಬೇಡಿಕೆ| ಮುಂಬೈ ಕರ್ನಾಟಕ ಕಿತ್ತೂರು ಕರ್ನಾಟಕ?

ಬೆಂಗಳೂರು[ಸೆ.07]: ಹೈದರಾಬಾದ್‌-ಕರ್ನಾಟಕವನ್ನು ಕಲ್ಯಾಣ ಕರ್ನಾಟಕ ಎಂದು ನಾಮಕರಣ ಮಾಡಿದ ಬೆನ್ನಲ್ಲೇ ಮುಂಬೈ-ಕರ್ನಾಟಕ ಪ್ರದೇಶವನ್ನು ಕಿತ್ತೂರು ಕರ್ನಾಟಕ ಎಂದು ಮರು ನಾಮಕರಣ ಮಾಡಲು ರಾಜ್ಯ ಸರ್ಕಾರವು ತೀರ್ಮಾನಿಸಿದೆ.

ಮುಂದಿನ ಸಚಿವ ಸಂಪುಟದಲ್ಲಿ ಮುಂಬೈ-ಕರ್ನಾಟಕ ಪ್ರದೇಶವನ್ನು ಕಿತ್ತೂರು ಕರ್ನಾಟಕ ಎಂದು ಬದಲಿಸುವ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಬೆಳಗಾವಿ ಜಿಲ್ಲೆಯವರಾದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಅವರು ಸಚಿವ ಸಂಪುಟ ಸಭೆಯಲ್ಲಿ ಹೈದ್ರಾಬಾದ್‌-ಕರ್ನಾಟಕದ ಹೆಸರು ಬದಲಿಸಿದಂತೆ ಮುಂಬೈ-ಕರ್ನಾಟಕದ ಹೆಸರು ಬದಲಿಸಬೇಕು ಎಂದು ಮನವಿ ಮಾಡಿದರು. ಇದಕ್ಕೆ ಸಕರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮುಂದಿನ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳುವ ಭರವಸೆ ನೀಡಿದರು ಎಂದು ಮೂಲಗಳು ತಿಳಿಸಿವೆ.

ನೆನಪಿರಲಿ: ಹೈದರಾಬಾದ್ ಕರ್ನಾಟಕಕ್ಕೆ ಹೊಸ ಹೆಸರು ನಾಮಕರಣ ಮಾಡಿದ ರಾಜ್ಯ ಸರ್ಕಾರ

ಮುಂಬೈ-ಕರ್ನಾಟಕ ಭಾಗಕ್ಕೆ ಕಿತ್ತೂರು ಕರ್ನಾಟಕ ಎಂದು ಹೆಸರು ಬದಲಿಸುವ ಬೇಡಿಕೆಯು ಹಲವು ದಶಕಗಳಿಂದ ಇದೆ. ಹೈದರಾಬಾದ್‌-ಕರ್ನಾಟಕ ಮತ್ತು ಮುಂಬೈ-ಕರ್ನಾಟಕ ಪ್ರದೇಶಗಳ ಹೆಸರನ್ನು ಒಟ್ಟಿಗೆ ಬದಲಿಸಬೇಕು ಎಂಬ ಕೂಗು ಇತ್ತು. ಆದರೆ, ಇದೀಗ ಕೇವಲ ಹೈದರಾಬಾದ್‌-ಕರ್ನಾಟಕ ಪ್ರದೇಶದ ಹೆಸರು ಮಾತ್ರ ಬದಲಿಸಲಾಗಿದ್ದು, ಮುಂದಿನ ದಿನದಲ್ಲಿ ಮುಂಬೈ-ಕರ್ನಾಟಕ ಪ್ರದೇಶದ ಹೆಸರು ಸಹ ಬದಲಾಗುವ ನಿರೀಕ್ಷೆ ಇದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ
ಕಾರ್‌ನಲ್ಲಿ ಜೋಡಿ 'ಸರಸ' ಸೆರೆಹಿಡಿದ ಟೋಲ್‌ ಮ್ಯಾನೇಜರ್‌, ಸಿಸಿಟಿವಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್‌!