ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ

Published : Nov 14, 2016, 03:10 AM ISTUpdated : Apr 11, 2018, 12:44 PM IST
ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ

ಸಾರಾಂಶ

ಜಯನಗರದ ನಾಲ್ಕನೇ ಹಂತದಲ್ಲಿ ಬೀದಿ ಬದಿ ವ್ಯಾಪಾರ ನಡೆಸುವ ಕುರಿತು ಮೃತ ಅಸ್ಲಾಂ ಪಾಷಾ, ಸೈಯದ್ ಇಮ್ರಾನ್ ಹಾಗೂ ಖಾಜಾ ಎಂಬುವರಿಗೆ ಶಂಶೀರ್ ಹಾಗೂ ತಂಡದೊಂದಿಗೆ ಆಗಾಗ  ಜಗಳ ನಡೆಯುತ್ತಿತ್ತು. ಇದೇ ವಿಚಾರವಾಗಿ ಶಂಶೀರ್ ಮತ್ತು ಟೀಮ್ ಅಸ್ಲಾಂ ತಂಡದ ಮೇಲೆ ಕಳೆದ ರಾತ್ರಿ ಅಟ್ಯಾಕ್ ಮಾಡಿದೆ. ಈ ವೇಳೆ ಅಸ್ಲಾಂ ಗೆ ಚಾಕು ಇರಿದಿದ್ದು ಇಮ್ರಾನ್ ಹಾಗೂ ಖಾಜಾ ಮೇಲೂ ಹಲ್ಲೆ ಮಾಡಿದ್ದಾರೆ.

ಬೆಂಗಳೂರು(ನ.14): ಬೀದಿ ಬದಿ ಬಟ್ಟೆ ವ್ಯಾಪಾರ ನಡೆಸುವ ಸ್ಥಳಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಸ್ಲಾಂ ಪಾಷಾ ಕೊಲೆಯಾದ ದುರ್ದೈವಿ .

ಜಯನಗರದ ನಾಲ್ಕನೇ ಹಂತದಲ್ಲಿ ಬೀದಿ ಬದಿ ವ್ಯಾಪಾರ ನಡೆಸುವ ಕುರಿತು ಮೃತ ಅಸ್ಲಾಂ ಪಾಷಾ, ಸೈಯದ್ ಇಮ್ರಾನ್ ಹಾಗೂ ಖಾಜಾ ಎಂಬುವರಿಗೆ ಶಂಶೀರ್ ಹಾಗೂ ತಂಡದೊಂದಿಗೆ ಆಗಾಗ  ಜಗಳ ನಡೆಯುತ್ತಿತ್ತು. ಇದೇ ವಿಚಾರವಾಗಿ ಶಂಶೀರ್ ಮತ್ತು ಟೀಮ್ ಅಸ್ಲಾಂ ತಂಡದ ಮೇಲೆ ಕಳೆದ ರಾತ್ರಿ ಅಟ್ಯಾಕ್ ಮಾಡಿದೆ. ಈ ವೇಳೆ ಅಸ್ಲಾಂ ಗೆ ಚಾಕು ಇರಿದಿದ್ದು ಇಮ್ರಾನ್ ಹಾಗೂ ಖಾಜಾ ಮೇಲೂ ಹಲ್ಲೆ ಮಾಡಿದ್ದಾರೆ.

ಗಾಯಾಳುಗಳನ್ನು ನಿಮ್ಹಾನ್ಸ್'ಗೆ ಕರೆದುಕೊಂಡು ಬರುವಾಗ ತೀವ್ರ ರಕ್ತ ಸ್ರಾವವಾಗಿ ಅಸ್ಲಾಂ ಪಾಷಾ ಮೃತಪಟ್ಟಿದ್ದಾರೆ. ಸದ್ಯ ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಜಯನಗರ ಪೊಲೀಸ್ರು ತನಿಖೆ ಶುರು ಮಾಡಿದ್ದಾರೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮದುವೆ ಮಾತುಕತೆಗೆಂದು ಕರೆಸಿ ಎಂಜಿನಿಯರಿಂಗ್ ವಿದ್ಯಾರ್ಥಿಯ ಮಸಣಕ್ಕೆ ಅಟ್ಟಿದ ಗರ್ಲ್‌ಫ್ರೆಂಡ್ ಮನೆಯವರು
ಕೆನಡಾದ ಮಹಿಳಾ ವೈದ್ಯರಿಗೆ ತೋರಿಸಬಾರದನ್ನು ತೋರಿಸಿದ ಭಾರತೀಯ ಯುವಕನ ಬಂಧನ