
ಮಂಗಳೂರು(ಸೆ.26): ತಲವಾರಿನಿಂದ ದಾಳಿ ನಡೆಸಿ, ಇಬ್ಬರ ಹತ್ಯೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪರಂಗಿ ಪೇಟೆಯಲ್ಲಿ ನಡೆದಿದೆ.
ಅಡ್ಯಾರ್ ನಿವಾಸಿ ರಿಯಾಜ್ ಅಲಿಯಾಸ್ ಜಿಯಾ ಹಾಗೂ ಫಯಾಜ್ ಹತ್ಯೆಯಾದವರು. ಮಾರುತಿ ಸ್ವಿಫ್ಟ್ ಕಾರಿನಲ್ಲಿ ಬರುತ್ತಿದ್ದ ಐವರ ಮೇಲೆ ದುಷ್ಕರ್ಮಿಗಳ ತಂಡ ತಲವಾರ್'ನಿಂದ ದಾಳಿ ಮಾಡಿದೆ. ಈ ಘಟನೆಯಲ್ಲಿ ಇಬ್ಬರ ಹತ್ಯೆಯಾದರೆ, ಅನಿಶ್, ಮುಸ್ತಾಕ್ ಮತ್ತು ಫಜಲ್ ಗಾಯಗೊಂಡಿದ್ದು, ಇವರ ಸ್ಥಿತಿ ಗಂಭೀರವಾಗಿದೆ.
2014ರ ಅಕ್ಟೋಬರ್ 31ರಂದು ನಡೆದಿದ್ದ ಇಜಾಜ್ ಹತ್ಯೆಗೆ ಪ್ರತೀಕಾರವಾಗಿ ದಾಳಿ ನಡೆದಿದೆ ಎಂದು ಶಂಕೆ ವ್ಯಕ್ತವಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.