
ನವದೆಹಲಿ (ಡಿ.03): ಪಂಜಾಬ್ನ ಗಡಿಯಲ್ಲಿ ಅಕ್ರಮವಾಗಿ ನುಸುಳಲು ಯತ್ನಿಸಿದ ಒಬ್ಬ ಉಗ್ರನನ್ನು ಬಿಎಸ್ಎಫ್ ಯೋಧರು ಹೊಡೆದುರುಳಿಸಿದ್ದಾರೆ.
ಗುರುದಾಸ್ ಪುರ ಜಿಲ್ಲೆ ಪಠಾಣ್ಕೋಟ್ ಬಳಿಯ ದಿಂಡಾ ಗಡಿಯಲ್ಲಿ ನಾಲ್ವರು ಉಗ್ರರು ಗಡಿ ಪ್ರವೇಶಿಸಿಸಲು ಯತ್ನಿಸಿದ್ದರು. ಈ ವೇಳೆ ಗುಂಡಿನ ದಾಳಿ ನಡೆಸಿದ ಯೋಧರು, ಉಗ್ರರ ಅಕ್ರಮವಾಗಿ ಗಡಿ ಪ್ರವೇಶಿಸುವ ಯತ್ನ ವಿಫಲಗೊಳಿಸಿದ್ದಾರೆ.
ಉಳಿದ ಮೂವರು ನುಸುಳುಕೋರರು ಅಡಗಿರುವ ಶಂಕೆ ಇದ್ದು, ಶೋಧ ಕಾರ್ಯ ನಡೆದಿದೆ. ಗುರುದಾಸ್ ಪುರ, ಧಿಂಡಾ, ಬಾಮಿಯಾಲ್ ಸೆಕ್ಟರ್ನಲ್ಲಿ ಅನುಮಾನಾಸ್ಪದ ವ್ಯಕ್ತಿಗಳ ಬಗ್ಗೆ ತೀವ್ರಾ ನಿಗಾ ಇಟ್ಟಿದ್ದು, ಎಲ್ಲೆಡೆ ಸೇನೆ ಬಿಗಿ ಭದ್ರತೆ ಏರ್ಪಡಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.