
ಬೆಂಗಳೂರು(ನ.15] ಸಹೋದ್ಯೋಗಿ ಸುನೀಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ನೀಡಿದ ಪ್ರಕರಣ ಮತ್ತು ಅಕ್ರಮ ಅಕ್ರಮವಾಗಿ ಶಸ್ತಾಸ್ತ್ರ ಹೊಂದಿದ ಪ್ರಕರಕಣ ಸಂಬಂಧ ಪತ್ರಕರ್ತ ರವಿ ಬೆಳಗೆರೆ ಮೇಲೆ ಆರೋಪಪಟ್ಟಿ ಸಲ್ಲಿಕೆಯಾಗಿದ್ದು ಸೆಷನ್ಸ್ ಕೋರ್ಟ್ ವಿಚಾರಣೆಗೆ ಬರಬೇಕಿದೆ. ಆದರೆ ಪ್ರಕರಣ ರದ್ದು ಕೋರಿ ರವಿ ಬೆಳೆಗೆರೆ ಹೈಕೋರ್ಟ್ ಮೆಟ್ಟಿಲು ಏರಿದ್ದಾರೆ.
ಪ್ರಕರಣವು ಕಾನೂನು ಬಾಹಿರ, ಅಸಮಂಜಸ ವಸ್ತು ಸಂಗತಿಗಳು ಮತ್ತು ಸಾಕ್ಷ್ಯಾಧಾರಗಳ ಕೊರತೆಯಿದೆ ಹೀಗಾಗಿ ಪ್ರಕರಣ ರದ್ದುಗೊಳಿಸಬೇಕು ಎಂದು ಅರ್ಜಿಯಲ್ಲಿ ಬೆಳಗೆರೆ ಮನವಿ ಮಾಡಿದ್ದಾರೆ ಹೈಕೋರ್ಟ್ ಗೆ ಇಂದು[ಗುರುವಾರ] ಅರ್ಜಿ ಸಲ್ಲಿಕೆಯಾಗಿದ್ದು ವಿಚಾರಣೆಗೆ ಬರಬೇಕಿದೆ.
ಏನಿದು ಪ್ರಕರಣ: ಗೌರಿ ಲಂಕೇಶ್ ಹತ್ಯೆ ವಿಚಾರಣೆ ವೇಳೆ ಬಂಧಿತನಾಗಿದ್ದ ಭೀಮಾ ತೀರದ ವಿಜಯಪುರದ ಚಡಚಣದ ಶಾರ್ಪ್ ಶೂಟರ್ ಶಶಿ ಮುಂಡೇವಾಡಗಿ ಸಿಸಿಬಿ ಪೊಲೀಸರ ಮುಂದೆ ಸ್ಫೋಟಕ ಮಾಹಿತಿಯನ್ನು ಕಳೆದ ಡಿಸೆಂಬರ್ ನಲ್ಲಿ ಹೊರ ಹಾಕಿದ್ದ. ರವಿ ಬೆಳಗೆರೆ ತಾವು ನಡೆಸುತ್ತಿದ್ದ ಪತ್ರಿಕೆಯ ವರದಿಗಾರ ಸಹದ್ಯೋಗಿ ಸುನೀಲ್ ಹೆಗ್ಗರವಳ್ಳಿ ಅವವರ ಹತ್ಯೆ ಮಾಡಲು ಸುಪಾರಿ ನನಗೆ ಸುಪಾರಿ ನೀಡಿದ್ದರು ಎಂದು ಪೊಲೀಸರ ಮುಂದೆ ಶಶಿ ಮುಂಡೇವಾಡಗಿ ಹೇಳಿದ್ದ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.