ಪ್ರಧಾನಿ ಕಚೇರಿ ವಿರುದ್ಧ ಬಿಜೆಪಿಯ ಜೋಶಿ ದಾಳಿ...!

Published : Sep 25, 2018, 09:40 AM IST
ಪ್ರಧಾನಿ ಕಚೇರಿ ವಿರುದ್ಧ ಬಿಜೆಪಿಯ ಜೋಶಿ ದಾಳಿ...!

ಸಾರಾಂಶ

ಈ ಹಿಂದೆ ಆರ್‌ಬಿಐ ಗವರ‌್ನರ್ ಆಗಿದ್ದ ರಘುರಾಂ ರಾಜನ್, ಬ್ಯಾಂಕ್‌ಗಳಿಗೆ ಭಾರೀ ಪ್ರಮಾಣದ ಸಾಲ ಉಳಿಸಿಕೊಂಡ ಉದ್ಯಮಿಗಳ ಪಟ್ಟಿಯೊಂದನ್ನು ಪ್ರಧಾನಿ ಕಚೇರಿಗೆ ಸಲ್ಲಿಸಿ, ಕ್ರಮಕ್ಕೆ ಶಿಫಾರಸು ಮಾಡಿದ್ದರು.

ನವದೆಹಲಿ[ಸೆ.25]: ಬ್ಯಾಂಕ್‌ಗಳಿಗೆ ನೂರಾರು ಕೋಟಿ ರು. ವಂಚಿಸಿದವರು ವಿದೇಶಗಳಿಗೆ ಪರಾರಿಯಾಗಲು ಎನ್‌ಡಿಎ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಎಂಬ ವಿಪಕ್ಷಗಳ ಆರೋಪದ ನಡುವೆಯೇ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಅವರದ್ದೇ ಪಕ್ಷದ ಮುರಳಿ ಮನೋಹರ್ ಜೋಶಿ ಮುಜುಗರ ತರುವಂಥ ನಡೆ ಇಟ್ಟಿದ್ದಾರೆ.

ಈ ಹಿಂದೆ ಆರ್‌ಬಿಐ ಗವರ್ನರ್ ಆಗಿದ್ದ ರಘುರಾಂ ರಾಜನ್, ಬ್ಯಾಂಕ್‌ಗಳಿಗೆ ಭಾರೀ ಪ್ರಮಾಣದ ಸಾಲ ಉಳಿಸಿಕೊಂಡ ಉದ್ಯಮಿಗಳ ಪಟ್ಟಿಯೊಂದನ್ನು ಪ್ರಧಾನಿ ಕಚೇರಿಗೆ ಸಲ್ಲಿಸಿ, ಕ್ರಮಕ್ಕೆ ಶಿಫಾರಸು ಮಾಡಿದ್ದರು. ಆ ಪಟ್ಟಿಯಲ್ಲಿ ಯಾರ್ಯಾರ ಹೆಸರಿತ್ತು? ಅಂಥವರ ವಿರುದ್ಧ ಏನು ಕ್ರಮ ಕೈಗೊಂಡಿದ್ದೀರಿ ಎಂಬುದರ ಬಗ್ಗೆ ಮಾಹಿತಿ ಕೋಡಿ ಎಂದು ಇದೀಗ ಜೋಷಿ ಅಧ್ಯಕ್ಷರಾಗಿರುವ ಸಂಸತ್ತಿನ ಅಂದಾಜು ಸಮಿತಿ ಪ್ರಧಾನಿ ಕಚೇರಿಗೆ ಸೂಚಿಸಿದೆ.

ಈ ವರದಿಯಲ್ಲಿ, ಈಗಾಗಲೇ ಪರಾರಿಯಾಗಿರುವ ಮಲ್ಯ, ಚೋಕ್ಸಿ, ನೀರವ್ ಮೋದಿ ಹೆಸರು ಇದ್ದಿದ್ದು ಪತ್ತೆಯಾದರೆ, ಎನ್‌ಡಿಎ ಸರ್ಕಾರಕ್ಕೆ ಮತ್ತೆ ಸಮಸ್ಯೆ ತಂದೊಡ್ಡುವ ಸಾಧ್ಯತೆ ಇದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್‌ಗೆ 3 ಕೋಟಿಗೂ ಅಧಿಕ ಮೊತ್ತ ಪಾವತಿ ಮಾಡುತ್ತಿರುವ ಶ್ರೀಮಂತರು!
ಸದಸ್ಯರ ತೀವ್ರ ವಿರೋಧದ ನಡುವೆಯೂ ಶೇ.3ರಷ್ಟು ತೆರಿಗೆ ಹೆಚ್ಚಳಕ್ಕೆ ಪಾಲಿಕೆ ನಿರ್ಧಾರ