ಮುತಾಲಿಕ್ ನೇತೃತ್ವದಲ್ಲಿ ಹಿಂದು ಧರ್ಮಕ್ಕೆ ಮತಾಂತರನಾದ ಮುಸ್ಲಿಂ

Published : Sep 04, 2017, 05:26 PM ISTUpdated : Apr 11, 2018, 01:05 PM IST
ಮುತಾಲಿಕ್  ನೇತೃತ್ವದಲ್ಲಿ ಹಿಂದು ಧರ್ಮಕ್ಕೆ ಮತಾಂತರನಾದ ಮುಸ್ಲಿಂ

ಸಾರಾಂಶ

ಹುಬ್ಬಳ್ಳಿ ಮೂಲದ ವಿಜಯಲಕ್ಷ್ಮಿ ಮತ್ತು ಮುಸ್ತಾಕ್ ಇವರಿಬ್ಬರು ಕಳೆದ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇತ್ತೀಚೆಗಷ್ಟೇ ಮದುವೆ ಕೂಡ ಆಗಿದ್ದರು

ಚಿಕ್ಕಮಗಳೂರು(ಸೆ.04): ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಚಿಕ್ಕಮಗಳೂರಿನಲ್ಲಿ ಮುಸ್ಲಿಂ ಧರ್ಮದ ಯುವಕ ಹಿಂದೂ ಧರ್ಮಕ್ಕೆ ಮತಾಂತರವಾಗಿದ್ದಾನೆ.

ಬಿಬಿಬಿ ನಗರದ ಓಂಕಾರೇಶ್ವರ ಗಣಪತಿ ದೇವಸ್ಥಾನದಲ್ಲಿ ಹಿಂದೂ ಮಹಾಸಭಾ ಗಣಪತಿಯ ಪೂಜಾ ಕಾರ್ಯಕ್ರಮದಲ್ಲಿ ಮತಾಂತರ ಕಾರ್ಯಕ್ರಮ ನಡೆದಿದೆ. ಹುಬ್ಬಳ್ಳಿ ಮೂಲದ ವಿಜಯಲಕ್ಷ್ಮಿ ಮತ್ತು ಮುಸ್ತಾಕ್ ಇವರಿಬ್ಬರು ಕಳೆದ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇತ್ತೀಚೆಗಷ್ಟೇ ಮದುವೆ ಕೂಡ ಆಗಿದ್ದರು .ಹಿಂದೂ ಧರ್ಮದ ಬಗ್ಗೆ ಅಪಾರ ನಂಬಿಕೆ ಇರುವ ಮುಸ್ತಾಕ್ ಇಂದು ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಹಿಂದೂ ಧರ್ಮಕ್ಕೆ ಮತಾಂತರವಾಗಿದ್ದಾನೆ. ಮುಸ್ತಾಕ್'ನಿಂದ ಪ್ರತಾಪ್ ಎಂದು ಮರುನಾಮಕರಣ ಗೊಂಡಿದ್ದಾನೆ. ಆ ನವದಂಪತಿಗಳಿಗೆ ಮುಂದೆಯೂ ಯಾವುದೇ ತೊಂದರೆ ಆಗದಂತೆ ಸಮುದಾಯ ನೋಡಿಕೊಳ್ಳುತ್ತೆಂದು ಹಿಂದು ಸಂಘಟಕರು ಆಶ್ವಾಸನೆ ಕೊಟ್ಟಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರು: 2 ಲಕ್ಷ ಬೆಲೆಯ ಗಿಳಿ ರಕ್ಷಿಸಲು ಹೋಗಿ ಪ್ರಾಣ ಕಳೆದುಕೊಂಡ ಯುವಕ!
ವಿಮಾನದಲ್ಲಿ ಹೃದಯಾಘಾತ- ಅಮೆರಿಕ ಪ್ರಜೆಯ ಜೀವ ಉಳಿಸಿದ ಡಾ. ಅಂಜಲಿ ನಿಂಬಾಳ್ಕರ್