ಮುಸ್ಲಿಂ ಕೈದಿಗೆ 'ಓಂ' ಬರೆ: ನ್ಯಾಯಾಲಯದಿಂದ ತನಿಖೆಗೆ ಕರೆ!

Published : Apr 20, 2019, 03:25 PM IST
ಮುಸ್ಲಿಂ ಕೈದಿಗೆ 'ಓಂ' ಬರೆ: ನ್ಯಾಯಾಲಯದಿಂದ ತನಿಖೆಗೆ ಕರೆ!

ಸಾರಾಂಶ

ಕೈದಿಯ ಬೆನ್ನಿಗೆ 'ಓಂ' ಚಿಹ್ನೆಯ ಬರೆ ಎಳೆದ ಜೈಲು ಅಧೀಕ್ಷಕ| ತಿಹಾರ್ ಜೈಲಿನಲ್ಲಿ ಜೈಲು ಅಧೀಕ್ಷನಿಂದ ಅಮಾನವೀಯ ಹಲ್ಲೆ| ಪ್ರಕರಣದ ತನಿಖೆಗೆ ಆದೇಶಿಸಿದ ದೆಹಲಿ ನ್ಯಾಯಾಲಯ| ಅಲ್ಪಸಂಖ್ಯಾತ ಕೈದಿಗೆ 'ಓಂ' ಚಿಹ್ನೆಯ ಬರೆ ಎಳೆದ ಅಧೀಕ್ಷಕ ರಾಜೇಶ್‌ ಚೌಹಾಣ್|

ನವದೆಹಲಿ(ಏ.20): ತಿಹಾರ್ ಜೈಲಿನಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ವಿಚಾರಣಾಧೀನ ಕೈದಿಯೊಬ್ಬನ ಬೆನ್ನಿಗೆ 'ಓಂ' ಚಿಹ್ನೆಯ ಬರೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯ ತನಿಖೆಗೆ ಆದೇಶ ನೀಡಿದೆ.

ಜೈಲಿನ ಡಿಜಿಪಿಗೆ ನೋಟಿಸ್ ‌ಜಾರಿ ಮಾಡಿರುವ ನ್ಯಾಯಾಲಯ, 24 ಗಂಟೆಯೊಳಗೆ ವರದಿ ಸಲ್ಲಿಸುವಂತೆ ನ್ಯಾಯಾಲಯ ಸೂಚಿಸಿದೆ. ಕಳೆದ ಏಪ್ರಿಲ್‌ 12ರಂದು ಜೈಲು ಅಧೀಕ್ಷಕ ರಾಜೇಶ್‌ ಚೌಹಾಣ್, ವಿಚಾರಣಾಧೀನ ಕೈದಿಗೆ ಹಿಂಸೆ ನೀಡಿ 'ಓಂ' ಚಿಹ್ನೆಯ ಬರೆ ಹಾಕಿದ್ದಾರೆ ಎನ್ನಲಾಗಿದೆ.

ಈ ಕುರಿತು ಕೈದಿ ನಬೀರ್ ಪರ ವಕೀಲ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಇದೊಂದಿ ಗಂಭೀರ ಪ್ರಕರಣವಾಗಿದ್ದು ಮೊದಲು ಕೈದಿಗೆ ವೈದ್ಯಕೀಯ ಚಿಕಿತ್ಸೆ ನೀಡಿ ಬಳಿಕ ಪ್ರಕರಣದ ತನಿಖೆ ನಡೆಸುವಂತೆ ಡಿಜಿಪಿಗೆ ಸೂಚನೆ ನೀಡಿದೆ.

ದೇಶದಲ್ಲಿ ಏ.11ರಿಂದ ಮೇ.19ರವೆರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂಧು ಎರಡು ಹಂತಗಳಲ್ಲಿ ಮತದಾನ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ. ಕರ್ನಾಟಕದಲ್ಲಿ 28. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

sculptor makeup: ಹುಡುಗರೇ ಆಹಾ ಚೂಪಾದ ಮೂಗು ಎಂಥಾ ಬ್ಯೂಟಿ ಅಂತ ಮರುಳಾಗದಿರಿ ಜೋಕೆ..!
ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮಾನಸಿಕ ಅಸ್ವಸ್ಥ ಎಂದ ಪಾಕಿಸ್ತಾನ ಸೇನೆ, ಕೋಲಾಹಲ ಶುರು