
ಹಿಂದೂ ಧರ್ಮದಿಂದ ಇಸ್ಲಾಂ ಧರ್ಮಕ್ಕೆ ಮತಾಂತರವಾಗಿದ್ದ ವ್ಯಕ್ತಿಯೊಬ್ಬ ಇವತ್ತು ತನ್ನ ಪುತ್ರನ ಸಮೇತ ಹಿಂದೂ ಧರ್ಮಕ್ಕೆ ವಾಪಸಾಗಿರುವ ಪ್ರಸಂಗ ಮೈಸೂರಿನಲ್ಲಿ ನಡೆದಿದೆ. ಮಾತೃ ಧರ್ಮಕ್ಕೆ ಮರಳಿರುವ ಸೈಯದ್ ಅಬ್ಬಾಸ್ 20 ವರ್ಷಗಳ ಹಿಂದೆ ಮುಸ್ಲಿಂ ಯುವತಿಯನ್ನ ಮದುವೆಯಾಗಿದ್ದ. ಯಾರದೋ ಒತ್ತಡಕ್ಕೆ ಮುಸ್ಲಿಂ ವಿವಾಹವಾದ ತಕ್ಷಣವೇ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡಿದ್ದ. ಇಬ್ಬರು ಗಂಡು ಮಕ್ಕಳಾದ ಮೇಲೆ ಪತ್ನಿ ಕಿರಿಯ ಪುತ್ರನ ಜೊತೆ ಕುಟುಂಬ ತೊರೆದು ತಮಿಳುನಾಡಿಗೆ ಹೊರಟುಹೋಗಿದ್ದಾಳೆ. ಇವತ್ತು ಸೈಯದ್ ಅಬ್ಬಾಸ್ ಆರ್ಯಸಮಾಜದ ಪುರೋಹಿತರ ಪೌರೋಹಿತ್ಯದಲ್ಲಿ ಹಿಂದೂ ಧರ್ಮದ ದೀಕ್ಷೆ ಪಡೆದು ಪೂರ್ವಾಶ್ರಮದ ಶೇಷಾದ್ರಿ ಅಂತಾ ಹೆಸರಿಟ್ಟುಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.