
ಬಂದಾ[ಆ.05]: ಮೂರು ಬಾರಿ ತಲಾಖ್ ಹೇಳುವ ಮುಸಲ್ಮಾನರ ಪದ್ಧತಿ ‘ತಲಾಖ್ ಎ ಬಿದ್ದತ್’ ಕಾನೂನು ಬಾಹಿರ ಎಂದು ಪರಿಗಣಿಸುವ ಮಸೂದೆಗೆ ರಾಜ್ಯಸಭೆಯಲ್ಲಿ ಅಂಗೀಕಾರ ಪಡೆದುಕೊಳ್ಳಲಾದ ಸುದ್ದಿ ತಿಳಿದು ಸಂಭ್ರಮಿಸಿದ ಪತ್ನಿಯ ವಿರುದ್ಧ ಸಿಟ್ಟಾದ ವ್ಯಕ್ತಿಯೊಬ್ಬ ಪೋಷಕರ ಎದುರಲ್ಲೇ ಮೂರು ಬಾರಿ ತಲಾಖ್ ಎಂದು ಹೇಳಿ ವಿಚ್ಛೇದನ ನೀಡಿದ ಪ್ರಸಂಗ ಉತ್ತರ ಪ್ರದೇಶದ ಫತೇಪುರದಲ್ಲಿ ನಡೆದಿದೆ.
ಫತೇಪುರದ ಬಿಂದ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಜಿಗ್ನಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮುಫೀದಾ ಖತುನ್ ಎಂಬಾಕೆ ಈಗ ಪತಿ ಶಂಶುದ್ದೀನ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ‘ಪತಿ ಶಂಶುದ್ದೀನ್ ಪೋಷಕರ ಎದುರಲ್ಲಿ ಮೂರು ಬಾರಿ ತಲಾಖ್ ಎಂದು ಕಾನೂನು ಬಾಹಿರವಾದ ಪದ್ಧತಿ ಮೂಲಕ ವಿಚ್ಛೇದನಕ್ಕೆ ಮುಂದಾಗಿದ್ದಾನೆ.
ಈ ಪದ್ಧತಿ ವಿರುದ್ಧ ರಾಜ್ಯಸಭೆಯಲ್ಲಿ ಮಸೂದೆ ಪಾಸ್ ಆಗಿದ್ದಕ್ಕೆ ನಾನು ಸಂಭ್ರಮಿಸಿದ್ದಕ್ಕೆ ಸೇಡು ತೀರಿಸಿಕೊಳ್ಳಲು ಹೀಗೆ ಮಾಡಿದ್ದಾನೆ’ ಎಂದು ಮುಫೀದಾ ದೂರು ದಾಖಲಿಸಿದ್ದಾಳೆ. ದೂರಿನನ್ವಯ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ ಎಂದು ಬಿಂದ್ಕಿ ಠಾಣಾ ಪೊಲೀಸ್ ಅಧಿಕಾರಿ ಅಭಿಷೇಕ್ ತಿವಾರಿ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.