
ವಾರಾಣಸಿ(ಆ.12): ತ್ರಿವಳಿ ತಲಾಖ್ ನಿಷೇಧ ಕಾನೂನು ಜಾರಿಗೆ ತರುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಮುಸ್ಲಿಂ ಸಮುದಾಯದ ಮಹಿಳೆಯರ ಗೌರವಕ್ಕೆ ಪಾತ್ರರಾಗಿದ್ದಾರೆ.
ತ್ರಿವಳಿ ತಲಾಖ್’ನ್ನು ನಿಷೇಧಿಸುವ ಮೂಲಕ ಮುಸ್ಲಿಂ ಹೆಣ್ಣುಮಕ್ಕಳ ಮೇಲಾಗುತ್ತಿದ್ದ ಐತಿಹಾಸಿಕ ಅನ್ಯಾಯವನ್ನು ಪ್ರಧಾನಿ ಮೋದಿ ಸರ್ಕಾರ ಸರಿಪಡಿಸಿದೆ. ಈ ಹಿನ್ನೆಲೆಯಲ್ಲಿ ಮುಸ್ಲಿಂ ಸಹೋದರಿಯರು ಪ್ರಧಾನಿ ಮೋದಿ ಅವರಲ್ಲಿ ತಮ್ಮ ಹಿರಿಯಣ್ಣನನ್ನು ಕಾಣುತ್ತಿದ್ದಾರೆ.
ಅದರಂತೆ ಇದೇ ಆ.15 ರಂದು ದೇಶಾದ್ಯಂತ ರಾಖಿ ಹಬ್ಬವನ್ನು ಆಚರಿಸಲಾಗುತ್ತಿದ್ದು, ಪ್ರಧಾನಿ ಮೋದಿ ಸ್ವಕ್ಷೇತ್ರ ವಾರಾಣಸಿಯ ಮುಸ್ಲಿಂ ಮಹಿಳೆಯರು ಪ್ರಧಾನಿಗೆ ರಾಖಿ ಕಳುಹಿಸಿದ್ದಾರೆ.
ಪ್ರಧಾನಿ ಮೋದಿ ಭಾವಚಿತ್ರ ಇರುವ ರಾಖಿ ತಯಾರಿಸಿರುವ ಮುಸ್ಲಿಂ ಸಹೋದರಿಯರು, ಅದನ್ನು ಮೋದಿ ಕಚೇರಿಗೆ ಕಳುಹಿಸಿ ಕೊಡುವ ತಮ್ಮ ಹಿರಿಯಣ್ಣನಿಗೆ ಪ್ರೀತಿಯ ಸಂದೇಶ ಕಳುಹಿಸಿದ್ದಾರೆ.
ಈ ಕುರಿತು ಮಾತನಾಡಿರುವ ಹುಮಾ ಬಾನೋ, ತ್ರಿವಳಿ ತಲಾಖ್ ನಿಷೇಧಿಸುವ ಮೂಲಕ ಮುಸ್ಲಿಂ ಮಹಿಳೆಯರ ಜೀವನ ಬದಲಿಸಿದ ಪ್ರಧಾನಿ ಮೋದಿ ನಮ್ಮೆಲ್ಲರ ಹಿರಿಯಣ್ಣ ಎಂದು ಕೃತಜ್ಞತೆ ಸಲ್ಲಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.