
ಹರ್ಯಾಣ (ಜ.19): ಹರ್ಯಾಣದಲ್ಲಿ ಹಿಂದುಗಳಷ್ಟೇ ಅಲ್ಲ ಮುಸ್ಲಿಮರು ಕೂಡ ಗೋ ರಕ್ಷಣೆಗೆ ಕೈ ಜೋಡಿಸಿದ್ದಾರೆ. ಹರ್ಯಾಣದ ಮುಸ್ಲಿಂ ಪ್ರಾಧಾನ್ಯ ಇರುವ ಮೇವತ್ ಪ್ರದೇಶದಲ್ಲಿ ಗೋ ರಕ್ಷಣೆ ಗುಂಪುಗಳನ್ನು ರಚಿಸಲಾಗಿದೆ. ಕಳೆದ ವರ್ಷ ಏಪ್ರಿಲ್ನಲ್ಲಿ ಗೋ ರಕ್ಷಕರ ಗುಂಪೊಂದು ಪೆಹ್ಲುಖಾನ್ ಎಂಬಾತನನ್ನು ಥಳಿಸಿ ಹತ್ಯೆ ಮಾಡಿದ ಘಟನೆ ಮುಸ್ಲಿಂ ಸಮುದಾಯದ ಆಘಾತಕ್ಕೆ ಕಾರಣವಾಗಿದೆ.
ತಮ್ಮ ಸಮುದಾಯದ ಮೇಲೆ ನಿರಂತರ ನಡೆಯುತ್ತಿರುವ ದಾಳಿಯನ್ನು ತಪ್ಪಿಸುವ ಸಲುವಾಗಿ ಮುಸ್ಲಿಮರು ತಾವೇ ಗೋ ರಕ್ಷಣೆಯ ಕಾರ್ಯಕ್ಕೆ ಮುಂದಾಗಿದ್ದಾರೆ. ಹರ್ಯಾಣದಲ್ಲಿ ಗೋ ಹತ್ಯೆ ಶಿಕ್ಷಾರ್ಹ ಅಪರಾಧವಾಗಿದ್ದು, ದಂಡದ ಜೊತೆಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಬಹುದಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.