
ಮೈಸೂರು (ನ.30): ಅಲ್ಪಸಂಖ್ಯಾತರಿಗಾಗಿ ಕಾಂಗ್ರೆಸ್ ಪಕ್ಷ ಬಲಿದಾನ ಮಾಡಿದೆ. ಮುಸಲ್ಮಾನರ ರಕ್ತದಲ್ಲಿ ಕಾಂಗ್ರೆಸ್ ಇರಬೇಕು. ಮುಸ್ಲಿಮರು ಕಾಂಗ್ರೆಸ್ ಜೊತೆ ಇರಬೇಕು ಎಂದು ಮೈಸೂರಿನ ಅಲ್ಪಸಂಖ್ಯಾತರ ಕಾಂಗ್ರೆಸ್ ಐಕ್ಯತಾ ಸಮಾವೇಶದಲ್ಲಿ ಪರಮೇಶ್ವರ್ ಹೇಳಿದ್ದಾರೆ.
ಈ ದೇಶದ ಸಂವಿಧಾನವನ್ನ ಬಿಜೆಪಿಯವರು ಬದಲಾಯಿಸಲು ಮುಂದಾಗಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಈ ದೇಶವನ್ನ ಹಿಂದೂ ರಾಷ್ಟ್ರ ಮಾಡಲು ಹೊರಟಿದೆ. ಎಲ್ಲರನ್ನು ಒಂದಾಗಿ ಕಾಣುವ ಮನೋಭಾವನೆ ಬಿಜೆಪಿಯ ನಾಯಕರಿಗೆ ಇಲ್ಲ. ಸ್ವಾತಂತ್ರ್ಯ ಬಂದಾಗ ಬಿಜೆಪಿ ಅಧಿಕಾರದಲ್ಲಿ ಇದ್ದಿದ್ದರೆ ಮುಸಲ್ಮಾನರನ್ನು ಪಾಕಿಸ್ತಾನಕ್ಕೆ ಕಳುಹಿಸುತ್ತಿದ್ದರು. ದೇಶ ವಿಭಜನೆ ಆಗಿದ್ದು ಸರಿಯಲ್ಲ, ಪಾಕಿಸ್ತಾನ-ಭಾರತ ಒಂದೇ ದೇಶವಾಗಿ ಉಳಿಯಬೇಕಿತ್ತು ಎಂದು ಪರಮೇಶ್ವರ್ ಐಕ್ಯತಾ ಸಮಾವೇಶದಲ್ಲಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.