ದೇವೇಗೌಡರಿಂದ ತಪ್ಪಿಸಲು ಸಾಧ್ಯವಿಲ್ಲ : ಮುತಾಲಿಕ್

Published : Sep 21, 2017, 11:57 PM ISTUpdated : Apr 11, 2018, 12:59 PM IST
ದೇವೇಗೌಡರಿಂದ ತಪ್ಪಿಸಲು ಸಾಧ್ಯವಿಲ್ಲ : ಮುತಾಲಿಕ್

ಸಾರಾಂಶ

ಗೌರಿ ಲಂಕೇಶ್ ಹತ್ಯೆಯನ್ನು ನಮ್ಮ ಶ್ರೀರಾಮಸೇನೆ ಖಂಡಿಸುತ್ತದೆ. ಗೌರಿ ಅವರ ವೈಚಾರಿಕತೆಯನ್ನು ನಾವು ಒಪ್ಪುವುದಿಲ್ಲ. ಆದರೆ ಹತ್ಯೆ ಮಾಡುವ ಸಂಸ್ಕೃತಿ ಹಿಂದೂ ಧರ್ಮದಲ್ಲಿಲ್ಲ.

ಮಂಡ್ಯ(ಸೆ.21): ದೇಶದಲ್ಲಿ ಹಿಂದೂಗಳು ಒಗ್ಗಟ್ಟಾದರೆ ಹಿಂದೂ ರಾಷ್ಟ್ರ ನಿರ್ಮಾಣವಾಗುವುದನ್ನು ತಪ್ಪಿಸಲು ದೇವೇಗೌಡ ಅವರು ಸೇರಿದಂತೆ ಯಾರಿಂದಲೂ ಸಾಧ್ಯವಿಲ್ಲ ಎಂದು ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಹಿಂದೂ ರಾಷ್ಟ್ರ ಆಗಲು ಬಿಡಲ್ಲ ಎಂಬ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿಕೆಗೆ ಅವರು ಹೀಗೆ ಪ್ರತಿಕ್ರಿಯಿಸಿದರು.

ಶಂಕರಮಠದಲ್ಲಿ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಮುತಾಲಿಕ್‌, ನವರಾತ್ರಿಯ ಮೊದಲ ದಿನ ಶಂಕರಮಠದಲ್ಲಿ ಪೂಜೆ ಸಲ್ಲಿಸಿದ್ದೇನೆ. ಹಿಂದೂಗಳಿಗೆ ಒಳ್ಳೆಯದಾಗಲಿ, ಹಿಂದೂ ರಾಷ್ಟ್ರ ನಿರ್ಮಾಣವಾಗಲಿ ಎಂದು ಪ್ರಾರ್ಥನೆ ಮಾಡಿದ್ದೇನೆ. ಗೌರಿ ಲಂಕೇಶ್ ಹತ್ಯೆಯನ್ನು ನಮ್ಮ ಶ್ರೀರಾಮಸೇನೆ ಖಂಡಿಸುತ್ತದೆ. ಗೌರಿ ಅವರ ವೈಚಾರಿಕತೆಯನ್ನು ನಾವು ಒಪ್ಪುವುದಿಲ್ಲ. ಆದರೆ ಹತ್ಯೆ ಮಾಡುವ ಸಂಸ್ಕೃತಿ ಹಿಂದೂ ಧರ್ಮದಲ್ಲಿಲ್ಲ. ಹಂತಕರನ್ನು ಕೂಡಲೇ ಬಂಧಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಸಾಹಿತಿಗಳು, ವಿಚಾರವಾದಿಗಳು ಗೌರಿ ಅವರನ್ನು ಹಿಂದೂಗಳೇ ಕೊಲೆ ಮಾಡಿದ್ದಾರೆ ಎಂದು ಆರೋಪ ಮಾಡುತ್ತಿದ್ದಾರೆ. ಇದು ಮೂರ್ಖತನದ ಹೇಳಿಕೆ. ಅವರಿಗೆ ಮಾನ ಮರ್ಯಾದೆ ಇದ್ದರೆ ತನಿಖೆಯ ದಿಕ್ಕು ತಪ್ಪಿಸುವ ಕೆಲಸವನ್ನು ಮಾಡಬೇಡಿ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಹಸ್ಯ ಡಿನ್ನರ್ ಮೀಟಿಂಗ್‌ನಲ್ಲಿ 'ಅಹಿಂದ' ಮಾಸ್ಟರ್ ಪ್ಲಾನ್! ಸಿಎಂ ಕುರ್ಚಿ ಉಳಿಸಿಕೊಳ್ಳಲು ಬೆಳಗಾವಿಯಲ್ಲಿ ಹೊಸ ರಣತಂತ್ರ?
India News Live: ಅಣುವಲಯ ಇನ್ನು ಖಾಸಗಿಗೂ ಮುಕ್ತ : ‘ಶಾಂತಿ’ ಮಸೂದೆಗೆ ಅನುಮೋದನೆ