ಗೋಮಾಂಸ ಸೇವಿಸುವವರಿಗೆ ರಕ್ಷಣೆಯಿದೆ, ಧರ್ಮ ರಕ್ಷಕರಿಗೆ ಯಾಕಿಲ್ಲ? ಮುತಾಲಿಕ್ ಪ್ರಶ್ನೆ

Published : Sep 20, 2017, 05:58 PM ISTUpdated : Apr 11, 2018, 12:41 PM IST
ಗೋಮಾಂಸ ಸೇವಿಸುವವರಿಗೆ ರಕ್ಷಣೆಯಿದೆ, ಧರ್ಮ ರಕ್ಷಕರಿಗೆ ಯಾಕಿಲ್ಲ? ಮುತಾಲಿಕ್ ಪ್ರಶ್ನೆ

ಸಾರಾಂಶ

ಹಿಂದೂ ವಿರೋಧಿಗಳಿಗೆ ರಕ್ಷಣೆ ನೀಡುವ ರಾಜ್ಯ ಸರ್ಕಾರ ಧರ್ಮ ಪಾಲಕರಿಗೆ ರಕ್ಷಣೆ ನೀಡಲು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್, ತಕ್ಷಣ ಧರ್ಮ ಪಾಲಕರಿಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಬೆಂಗಳೂರು: ಹಿಂದೂ ವಿರೋಧಿಗಳಿಗೆ ರಕ್ಷಣೆ ನೀಡುವ ರಾಜ್ಯ ಸರ್ಕಾರ ಧರ್ಮ ಪಾಲಕರಿಗೆ ರಕ್ಷಣೆ ನೀಡಲು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್, ತಕ್ಷಣ ಧರ್ಮ ಪಾಲಕರಿಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಆನಂದ್ ಗುರೂಜಿ ಅವರ ನಿವಾಸ ಆವರಣದಲ್ಲಿ ಗೋಮಾಂಸ, ಮದ್ಯ ಬಾಟಲಿ ಎಸೆದ ಕಿಡಿಗೇಡಿಗಳ ಕೃತ್ಯ ಖಂಡಿಸಿ ಪುರಭವನದ ಮುಂದೆ ಬೆಂಬಲಿಗರೊಂದಿಗೆ ಮಂಗಳವಾರ ಪ್ರತಿಭಟನೆ ನಡೆಸಿ ಮಾತನಾಡಿದರು.

ಆನಂದ್ ಗುರೂಜಿ ಅವರ ಮೇಲೆ ಪದೇ ಪದೇ ದಾಳಿ ನಡೆಸಲಾಗುತ್ತಿದೆ. ಅವರಿಗೆ ರಕ್ಷಣೆ ನೀಡಬೇಕು. ಗೋಮಾಂಸ ಸೇವಿಸುವವರಿಗೆ ರಕ್ಷಣೆ ಕೊಡಲಾಗುತ್ತದೆ. ಆದರೆ ಗೋ ರಕ್ಷಿಸುವವರಿಗೆ ಭದ್ರತೆ ಇಲ್ಲವಾಗಿದೆ. ಹಿಂದೂ ವಿರೋಧಿಗಳಿಗೆ ರಕ್ಷಣೆ ಕಲ್ಪಿಸುವ ಸರ್ಕಾರ ಧರ್ಮ ಪಾಲಕರಿಗೆ ನೀಡುತ್ತಿಲ್ಲ. ತಕ್ಷಣ ಈ ಬಗ್ಗೆ ಸರ್ಕಾರ ಗಮನಿಸಿ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದರು.

ಕೆಲವು ಕಿಡಿಗೇಡಿಗಳು ಗೋಮಾಂಸ, ಮದ್ಯಬಾಟಲಿ ಎಸೆಯುವ ಮೂಲಕ ಆನಂದ ಗುರೂಜಿ ಅವರನ್ನು ಅವಮಾನ ಮಾಡಲಾಗಿದೆ. ಅವರು ಯಾವುದೇ ಒಂದು ಸಮಾಜಕ್ಕೆ ಸೇರಿದವರಲ್ಲ. ಧರ್ಮದ ಪಾಲಕರಾಗಿದ್ದಾರೆ. ಗುರೂಜಿಗೆ ಅವಮಾನ ಮಾಡಿರುವ ದುಷ್ಕರ್ಮಿಗಳನ್ನು ತಕ್ಷಣವೇ ಬಂಧಿಸಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಇದೇ ವೇಳೆ ಎಚ್ಚರಿಕೆ ನೀಡಿದರು.

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯು ಖಂಡನೀಯ. ನಮ್ಮ ನಡುವೆ ವೈಚಾರಿಕ ಸಂಘರ್ಷ ನಡೆದಿತ್ತೆ ವಿನಃ ವೈಯಕ್ತಿಕ ಸಂಘರ್ಷ ಇರಲಿಲ್ಲ. ಹಿಂಸೆಯಲ್ಲಿ ನಮಗೆ ನಂಬಿಕೆ ಇಲ್ಲ. ಇಸ್ಲಾಮಿಕ್, ಕಮ್ಯೂನಿಸ್ಟ್ ಪಕ್ಷದವರು, ಮಾರ್ಕ್ಸ್ ವಾದಿಗಳು ಹಿಂಸೆ ಮಾಡುತ್ತಿದ್ದಾರೆ. ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಜ್ಯದ ಪೊಲೀಸರ ಮೇಲೆ ನಂಬಿಕೆ ಇದೆ. ಹಿಂದೂಗಳು, ಆರ್‌ಎಸ್‌ಎಸ್ ವಿರುದ್ಧ ಆರೋಪ ಮಾಡಲಾಗುತ್ತಿದೆ. ಪೊಲೀಸರ ತನಿಖೆಯ ದಾರಿ ತಪ್ಪಿಸುವ ಕೆಲಸ ಮಾಡಬಾರದು. ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಪೊಲೀಸರ ತನಿಖೆಗೆ ಅಡ್ಡಿಪಡಿಸುವಂತಹ ಕೆಲಸ ಮಾಡಬಾರದು ಎಂದು ವಿಚಾರವಾದಿಗಳಿಗೆ ಎಚ್ಚರಿಕೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಳ್ಳಾರಿಯಲ್ಲಿ ಎಫ್‌ಡಿಎ ಸ್ಪರ್ಧಾತ್ಮಕ ಪರೀಕ್ಷೆ: ಕಾಲು ಗೆಜ್ಜೆ ತೆಗೆದು ಪರೀಕ್ಷೆ ಬರೆದ ವಿದ್ಯಾರ್ಥಿನಿಯರು
ಜವರಾಯನಂತೆ ಬಂತು ಜಲ್ಲಿಕಲ್ಲು ತುಂಬಿದ್ದ ಲಾರಿ: ಮನೆ ಮುಂದೆ ಚಳಿ ಕಾಯಿಸುತ್ತಿದ್ದ 90 ವರ್ಷದ ವೃದ್ಧ ಬಲಿ