
ನವದೆಹಲಿ : ಐದು ರಾಜ್ಯಗಳಲ್ಲಿ ಈಗಾಗಲೇ ಚುನಾವಣೆ ಕಣ ರಂಗೇರುತ್ತಿದೆ. ಇದೇ ವರ್ಷ ಡಿಸೆಂಬರ್ ವೇಳೆಗೆ ಐದು ರಾಜ್ಯಗಳಲ್ಲಿ ಚುನಾವಣೆ ನಡೆಸಲು ನಿರ್ಧಾರ ಮಾಡಲಾಗಿದೆ.
ಈ ಸಂಬಂಧ ನಮೋ ಆ್ಯಪ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದು, ಬಿಜೆಪಿ ಬಲಪಡಿಸಲು ಯಾವ ರೀತಿ ಕಾರ್ಯಪೃವೃತ್ತರಾಗಬೇಕು ಎನ್ನುವುದನ್ನು ತಿಳಿಸಿದ್ದಾರೆ.
ಅಲ್ಲದೇ ಕಠಿಣ ಪರಿಶ್ರಮದಿಂದಲೇ ಕಳೆದ 2014ರ ಲೋಕಸಭಾ ಚುನಾವಣೆಯಲ್ಲಿ ಐತಿಹಾಸಿಕವಾದ ಗೆಲುವನ್ನು ಸಾಧಿಸಲು ಸಾಧ್ಯವಾಯಿತು ಎಂದು ಅವರು ಹೇಳಿದ್ದಾರೆ. ನನ್ನ ವ್ಯಾಪ್ತಿಯ ಪ್ರದೇಶವನ್ನು ನಾನು ಬಲಪಡಿಸಬೇಕು ಎನ್ನುವ ಮಂತ್ರವೇ ಗೆಲುವಿನ ಮಂತ್ರವಾಗಿರುತ್ತದೆ ಎಂದು ಅವರು ಹೇಳಿದರು.
ಇನ್ನು ಇದೇ ವೇಳೆ ಬಿಜೆಪಿ ಒಂದರಲ್ಲಿ ಮಾತ್ರವೇ ಸಾಮಾನ್ಯನೂ ಕೂಡ ಪ್ರಧಾನಿ ಅಭ್ಯರ್ಥಿಯಾಗಬಲ್ಲ. ಆದರೆ ಅತ್ತಂತ ಪ್ರಭಲ ನಾಯಕರಿದ್ದರೂ ಕೂಡ ಅವರೆಲ್ಲರೂ ಒಂದೇ ಕುಟುಂಬದ ಹಿತಾಸಕ್ತಿಗಾಗಿ ದುಡಿಯುವುದು ಕಾಂಗ್ರೆಸ್ ಪಕ್ಷದಲ್ಲಿರುವಂತಹ ವಿಚಾರವಾಗಿದೆ. ಅವರೆಲ್ಲರೂ ಕೂಡ ತಮ್ಮ ಹಿತಾಸಕ್ತಿಗಳನ್ನೇ ತ್ಯಾಗ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.