
ಮೈಸೂರು(ನ.26): ಮೈಸೂರಿನಲ್ಲಿ ನಡೆಯುತ್ತಿರುವ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇಂದು ತೆರೆ ಬೀಳಲಿದೆ.
ಮೊದಲೆರಡು ದಿನದ ಸಮ್ಮೇಳನ ಯಶಸ್ವಿಯಾಗಿದೆ. ಇಂದೂ ಕೂಡ ವಿವಿಧ ಗೋಷ್ಠಿಗಳು ನಡೆಯಲಿವೆ. ಬೆಳಗ್ಗೆ 9.30 ಕ್ಕೆ ಪ್ರಧಾನ ವೇದಿಕೆಯಲ್ಲಿ ಸಮಕಾಲೀನ ಸಂದರ್ಭ-ಬಹುತ್ವ ಸವಾಲುಗಳು ವಿಚಾರವಾಗಿ ಗೋಷ್ಠಿ ನಡೆಯಲಿದೆ. ನಂತರ ಡಾ. ಸಿದ್ದಲಿಂಗ ಪಟ್ಟಣ ಶೆಟ್ಟಿ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಲಿದ್ದು, ಡಾ.ಜಯಂತ್ ಕಾಯ್ಕಿಣಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದ ನಡೆಯಲಿದ್ದು, ಬಹಿರಂಗ ಅಧಿವೇಶನ ನಡೆಯಲಿದೆ. ಇನ್ನೂ ಸಮಾರೋಪ ಸಮಾರಂಭಕ್ಕೆ ಗೌರವ ಅಥಿತಿಗಳಾಗಿ ಕೇಂದ್ರ ಸಚಿವ ಅನಂತಕುಮಾರ್, ರಾಜ್ಯ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವ ಹೆಚ್.ಕೆ.ಪಾಟೀಲ್, ಹಿರಿಯ ಸಾಹಿತಿ ಹೆಚ್.ಎಸ್.ವೆಂಕಟೇಶ್ ಮೂರ್ತಿ ಭಾಗಿಯಾಗಲಿದ್ದಾರೆ. ಇನ್ನೂ ಇಂದು ಭಾನುವಾರವಾಗಿದ್ದರಿಂದ ವೀಕೆಂಡ್ ಮೂಡ್ನಲ್ಲಿರುವ ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸಮ್ಮೇಳನಕ್ಕೆ ಆಗಮಿಸುವ ನಿರೀಕ್ಷೆಯಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.