ವಯನಾಡು ಭೂಕುಸಿತ ಬೆನ್ನಲ್ಲೇ ಮತ್ತೆ ಆತಂಕ ಸೃಷ್ಟಿಸಿದ ನಿಗೂಢ ಶಬ್ದ!

Published : Aug 10, 2024, 07:34 AM IST
ವಯನಾಡು ಭೂಕುಸಿತ ಬೆನ್ನಲ್ಲೇ ಮತ್ತೆ ಆತಂಕ ಸೃಷ್ಟಿಸಿದ ನಿಗೂಢ ಶಬ್ದ!

ಸಾರಾಂಶ

400ಕ್ಕೂ ಹೆಚ್ಚು ಜನರನ್ನು ಬಲಿಪಡೆದ ಇತ್ತೀಚಿನ ಭೀಕರ ಭೂಕುಸಿತದಿಂದ ಚೇತರಿಸಿಕೊಳ್ಳುವ ಮೊದಲೇ ಕೇರಳದ ವಯನಾಡು ಜಿಲ್ಲೆಯ ಕೆಲ ಪ್ರದೇಶಗಳಲ್ಲಿ ಶುಕ್ರವಾರ ಭೂಮಿಯಡಿ ಭಾರೀ ಸದ್ದು ಕೇಳಿಬಂದಿದೆ. ಇದು, ಭೂಕಂಪವಿರಬಹುದು ಅಥವಾ ಭೂಕಂಪದ ಸಾಧ್ಯತೆ ಇರಬಹುದು ಎಂದು ಸ್ಥಳೀಯರು ಆತಂಕಗೊಂಡಿದ್ದಾರೆ.

ವಯನಾಡು (ಆ.10): 400ಕ್ಕೂ ಹೆಚ್ಚು ಜನರನ್ನು ಬಲಿಪಡೆದ ಇತ್ತೀಚಿನ ಭೀಕರ ಭೂಕುಸಿತದಿಂದ ಚೇತರಿಸಿಕೊಳ್ಳುವ ಮೊದಲೇ ಕೇರಳದ ವಯನಾಡು ಜಿಲ್ಲೆಯ ಕೆಲ ಪ್ರದೇಶಗಳಲ್ಲಿ ಶುಕ್ರವಾರ ಭೂಮಿಯಡಿ ಭಾರೀ ಸದ್ದು ಕೇಳಿಬಂದಿದೆ. ಇದು, ಭೂಕಂಪವಿರಬಹುದು ಅಥವಾ ಭೂಕಂಪದ ಸಾಧ್ಯತೆ ಇರಬಹುದು ಎಂದು ಸ್ಥಳೀಯರು ಆತಂಕಗೊಂಡಿದ್ದಾರೆ.

ವಯನಾಡು ಜಿಲ್ಲೆಯ ವೈಥಿರಿ ತಾಲೂಕಿನ ಅಂಬಲವಾಯಲ್‌ ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಶುಕ್ರವಾರ ಬೆಳಗ್ಗೆ 10.15ರ ವೇಳೆಗೆ ನಿಗೂಢ ಶಬ್ದವೊಂದು ಕೇಳಿಬಂದಿದೆ. ಹೀಗಾಗಿ ಜನರು ಆತಂಕದಿಂದ ನಿರಾಶ್ರಿತ ಕೇಂದ್ರಗಳು, ಮನೆ, ಕಟ್ಟಡಗಳಿಂದ ಹೊರಗೆ ಓಡಿಬಂದಿದ್ದಾರೆ. ಈ ಸಮಯದಲ್ಲಿ ಮನೆಯ ಕಿಟಕಿ ಗಾಜು ಅಲುಗಾಡಿದಂತಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ವಯನಾಡು ಭೂಕುಸಿತ: ರಕ್ಷಣೆ ಮಾಡಿದ ಯೋಧರು, ಶ್ವಾನದಳಕ್ಕೆ ಕೇರಳಿಗರ ಭಾವುಕ ವಿದಾಯ

ಜೊತೆಗೆ ಕಲ್ಲಿಕೋಟೆ ಹಾಗೂ ಪಾಲಕ್ಕಾಡ್‌ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಈ ರೀತಿಯ ಶಬ್ದ ಕೇಳಿಸಿದೆ ಎಂದು ವರದಿಯಾಗಿದೆ. ಈಗಾಗಲೇ ಭೂಕಂಪನದ ಬಗ್ಗೆ ಮೌಲ್ಯಮಾಪನ ಮಾಡಲು ಕೇಂದ್ರದ ತಜ್ಞರ ತಂಡವು ವಯನಾಡಿಗೆ ಭೇಟಿ ನೀಡಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ವಯನಾಡು ಜಿಲ್ಲಾಧಿಕಾರಿ ಡಿ.ಆರ್‌.ಮೇಘಶ್ರೀ, ‘ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ತಜ್ಞರು ನಿಗೂಢ ಸದ್ದಿನ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ. ಇದುವರೆಗಿನ ದಾಖಲೆಗಳ ಅನ್ವಯ ಭೂಮಿ ಕಂಪಿಸಿದ ಯಾವುದೇ ಮಾಹಿತಿ ಸಿಕ್ಕಿಲ್ಲ’ ಎಂದು ಹೇಳಿದ್ದಾರೆ.

ಭೂಕುಸಿತದಲ್ಲಿ ಆಸ್ತಿಪಾಸ್ತಿ ಕಳೆದುಕೊಂಡವರಿಗೆ ಸಂಕಷ್ಟ: ಸಾಲ ಕಟ್ಟುವಂತೆ ವಯನಾಡು ಸಂತ್ರಸ್ತರಿಗೆ ಬ್ಯಾಂಕ್‌ ಕಾಟ..!

ವಯನಾಡಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ, ಭೂಕುಸಿತ ಸಂಭವಿಸಿದ ಕೇರಳದ ವಯನಾಡಿಗೆ ಶನಿವಾರ ಭೇಟಿ ನೀಡಲಿದ್ದು, ಪರಿಹಾರ ಹಾಗೂ ಪುನರ್ವಸತಿ ಕುರಿತು ಪರೀಶಿಲನೆ ನಡೆಸಲಿದ್ದಾರೆ. ಮೋದಿ ಬೆಳಿಗ್ಗೆ 11 ಗಂಟೆಗೆ ಕಣ್ಣೂರಿಗೆ ಬಂದಿಳಿಯಲಿದ್ದಾರೆ. ಬಳಿಕ ವಯನಾಡಿನಲ್ಲಿ ವೈಮಾನಿಕ ಸಮೀಕ್ಷೆಯನ್ನು ನಡೆಸಲಿದ್ದಾರೆ. ಬಳಿಕ ಭೂಕುಸಿತ ಸಂಭವಿಸಿದ ಪ್ರದೇಶಗಳಲ್ಲಿರುವ ನಿರಾಶ್ರಿತರ ಶಿಬಿರ, ಆಸ್ಪತ್ರೆಗಳಿಗೆ ಭೇಟಿ ನೀಡಲಿದ್ದು, ದುರಂತದಲ್ಲಿ ಬದುಕುಳಿದವರ ಜೊತೆಗೆ ಸಂವಾದ ನಡೆಸಲಿದ್ದಾರೆ. ಬಳಿಕ ಅಧಿಕಾರಿಗಳ ಜೊತೆ ಸಭೆ ನಡೆಸಿ, ಪರಿಹಾರ ಕಾರ್ಯಗಳ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನಿಗೆ ಪೋಷಕರಿಂದ ಧರ್ಮದೇಟು!
ವೇದಿಕೆಯಲ್ಲಿ ವಧು ಸದ್ದಿಲ್ಲದೆ ಮಾಡಿದ ಅದೊಂದು ಕೆಲಸ ಇಂಟರ್‌ನೆಟ್‌ನಲ್ಲಿ ಫುಲ್ ವೈರಲ್ ಆಯ್ತು..