ಜಿಲ್ಲಾ ಉಸ್ತುವಾರಿ ಸಚಿವ ಎಂ.ಕೃಷ್ಣ ಸಕ್ಕರೆ ಕಾರ್ಖಾನೆಯ ಬಾಯ್ಲರ್’ಗೆ ಬೆಂಕಿ ಸ್ಪರ್ಷಿಸುವ ಮೂಲಕ ಪುನಾರಂಭಕ್ಕೆ ಚಾಲನೆ ನೀಡಿದರು.
ಮಂಡ್ಯ (ಏ.14): ಕಳೆದ ಮೂರು ವರ್ಷಗಳಿಂದ ಸ್ಥಗಿತಗೊಂಡಿದ್ದ ಮಂಡ್ಯ ರೈತರ ಜೀವನಾಡಿ ಮೈಶುಗರ್ ಸಕ್ಕರೆ ಕಾರ್ಖಾನೆ ಕೊನೆಗೂ ಪುನಾರಂಭಗೊಂಡಿದೆ.
ಜಿಲ್ಲಾ ಉಸ್ತುವಾರಿ ಸಚಿವ ಎಂ.ಕೃಷ್ಣ ಸಕ್ಕರೆ ಕಾರ್ಖಾನೆಯ ಬಾಯ್ಲರ್’ಗೆ ಬೆಂಕಿ ಸ್ಪರ್ಷಿಸುವ ಮೂಲಕ ಪುನಾರಂಭಕ್ಕೆ ಚಾಲನೆ ನೀಡಿದರು.
ಈ ವೇಳೆ ಮಂಡ್ಯ ಶಾಸಕ ಅಂಬರೀಶ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆತ್ಮಾನಂದ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು. ಇನ್ನೂ ಕಾರ್ಖಾನೆ ಪುನಾರಂಭಗೊಂಡಿದ್ದಕ್ಕೆ ಸಂತಸ ವ್ಯಕ್ತಪಡಿಸಿದ ಶಾಸಕ ಅಂಬರೀಶ್, ಕಾರ್ಖಾನೆ ಪುನಾರಂಭಕ್ಕೆ ಸರ್ಕಾರ ಸಾಕಷ್ಟು ನೆರವು ನೀಡಿದ್ದು, ಮುಂದಿನ ದಿನಗಳಲ್ಲಿ ಈ ಕಾರ್ಖಾನೆ ಮತ್ತಷ್ಟು ಅಭಿವೃದ್ದಿ ಪಥದಲ್ಲಿ ಸಾಗಲಿದೆ ಎಂದು ಭರವಸೆ ನೀಡಿದರು. ಇದಕ್ಕೂ ಮುನ್ನ ಶಾಸಕ ಅಂಬರೀಶ್ ಕಾರ್ಖಾನೆಯ ಅಧಿಕಾರಿಗಳು ಮತ್ತು ರೈತರೊಂದಿಗೆ ಕೆಲಕಾಲ ಸಭೆ ನಡೆಸಿದರು.