ಮೈಸೂರು ಜಂಬೂ ಸವಾರಿಯಲ್ಲಿ ಅಂಬಾರಿ ಹೊತ್ತ ದ್ರೋಣ ಇನ್ನಿಲ್ಲ

Published : Apr 26, 2019, 04:29 PM ISTUpdated : Apr 26, 2019, 05:49 PM IST
ಮೈಸೂರು ಜಂಬೂ ಸವಾರಿಯಲ್ಲಿ ಅಂಬಾರಿ ಹೊತ್ತ  ದ್ರೋಣ ಇನ್ನಿಲ್ಲ

ಸಾರಾಂಶ

ಮೈಸೂರ ದಸರದಲ್ಲಿ ಪಾಲ್ಗೊಂಡಿದ್ದ ಆನೆ ದ್ರೋಣ ಏಕಾ ಏಕಿ ಮೃತಪಟ್ಟಿದೆ. ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಕೊಡಗು: ರಾಜ ಗಾಂಭೀರ್ಯದ ನಡಿಗೆಯೊಂದಿಗೆ, ಲಕ್ಷಾಂತರ ಮಂದಿಯ ಸಮ್ಮುಖದಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನ ಜಗತ್ಪ್ರಸಿದ್ಧ ಜಂಬೂ ಸವಾರಿ ಮೆರವಣೆಗೆಯಲ್ಲಿ ಕಳೆದ ವರ್ಷವೂ ಅಂಬಾರಿ ಹೊತ್ತಿದ್ದ ದ್ರೋಣ ದೀಢೀರ್ ಅಸುನೀಗಿದ್ದಾನೆ. ಹೃದಯಾಘಾತದಿಂದ ಅಸುನೀಗಿರಬಹುದೆಂದು ಶಂಕಿಸಲಾಗಿದೆ. 

"

ನಾಗರಹೊಳೆ ಅಭಯಾರಣ್ಯದ ಮತ್ತಿಗೋಡು ಆನೆ‌ ಶಿಬಿರದಲ್ಲಿ ದ್ರೋಣನಿದ್ದ. 2014ರಲ್ಲಿ ಸೆರೆ ಹಿಡಿದಿದ್ದ ದ್ರೋಣನಿಗೆ 37 ವರ್ಷ ವಯಸ್ಸಾಗಿತ್ತು. 2017, 2018ರಲ್ಲಿ ದಸರಾ ಮಹೋತ್ಸವದಲ್ಲಿ ದ್ರೋಣ ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಅಂಬಾರಿಯನ್ನು ಹೊತ್ತು ಸಾಗಿದ್ದ. 

ಮತ್ತಿಗೋಡು ಶಿಬಿರದಲ್ಲಿ ಶುಕ್ರವಾರ ಬೆಳಗ್ಗೆ ಇದ್ದಕ್ಕಿದ್ದಂತೆ ಅಸ್ವಸ್ಥನಾಗಿದ್ದ ದ್ರೋಣ. ನೀರಿನ‌ ತೊಟ್ಟಿ ಬಳಿ ನೀರು ಕುಡಿದು, ದಿಢೀರ್ ಕುಸಿದುಬಿದ್ದು, ಕೊನೆಯುಸಿರೆಳೆದಿದ್ದಾನೆ. 

ನಾಗರಹೊಳೆ ಡಿಎಫ್‌ಒ ಹಾಗೂ ಆನೆ‌ ವೈದ್ಯ ಡಾ. ನಾಗರಾಜು ಸ್ಥಳಕ್ಕೆ ತಕ್ಷಣವೇ ಧಾವಿಸಿ, ಆನೆಯ ಆರೋಗ್ಯ ಪರಿಶೀಲಿಸಿದ್ದಾರೆ. ಆದರೆ, ಅಷ್ಟರೊಳಗೆ ಪ್ರಸಿದ್ಧ ಆನೆ ಕೊನೆಯುಸಿರೆಳೆದಾಗಿತ್ತು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುದ್ದಿನ ಶ್ವಾನಗಳಿಗಾಗಿ ಅನಿಮೇಟೆಡ್ ಸಿನಿಮಾ ಶೋ ಆಯೋಜಿಸಿದ ಥಿಯೇಟರ್: ರೆಡ್ ಕಾರ್ಪೆಟ್ ಹಾಸಿ ಸ್ವಾಗತ
ಇಂಡಿಗೋ ವಿಮಾನ ರದ್ದಾಗಿ ಪರದಾಡುತ್ತಿರುವ ಪ್ರಯಾಣಿಕರ ನೆರವಿಗೆ ಧಾವಿಸಿದ ಭಾರತೀಯ ರೈಲ್ವೆ