
ಮೈಸೂರು (ಸೆ.29): ನಾಡಹಬ್ಬ ದಸರಾ ಮಹೋತ್ಸವ ಉದ್ಘಾಟನೆಗಾಗಿ ಹಿರಿಯ ಕವಿ ಚನ್ನವೀರ ಕಣವಿ ಮೈಸೂರಿಗೆ ಆಗಮಿಸಿದ್ದಾರೆ.
ರೈಲಿನಲ್ಲಿ ಮೈಸೂರಿಗೆ ಆಗಮಿಸಿ ಅವರನ್ನ ಸಂಸದ ಪ್ರತಾಪಸಿಂಹ ಮೈಸೂರು ಪೇಟ ತೊಡಿಸಿ ಅಭಿನಂದಿಸಿದರು. ಈವೇಳೆ ಮಾತನಾಡಿದ ಕಣವಿ, ದಸರಾ ಉದ್ಘಾಟಕರಾಗಿ ಬರಬೇಕೆಂದು ಮುಖ್ಯಮಂತ್ರಿಗಳು ಕರೆ ಮಾಡಿದಾಗ ನನಗೆ ಅಶ್ಚರ್ಯವಾಗಿತ್ತು ಎಂದಿದ್ದಾರೆ.
ಮೊದಲ ಬಾರಿ ದಸರಾ ಉದ್ಘಾಟಗರಾಗಿ ಆಯ್ಕೆಯಾಗಿರುವುದು ಖುಷಿ ತಂದಿದೆ ಎಂದ ಕಣವಿ, ಕಾವೇರಿ, ಮಹದಾಯಿ ವಿಚಾರದಲ್ಲಿ ಪ್ರಧಾನಿ ಮಧ್ಯಸ್ಥಿಕೆ ವಹಿಸಬೇಕು. ರೈತರು ಶಾಂತಿಯುತವಾಗಿ ಹೋರಾಡಬೇಕು ಎಂದು ಮನವಿ ಮಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.