
ಬೆಂಗಳೂರು (ಮೇ. 18): ಮೈಸೂರಿನ ಫಾರೆಸ್ಟ್ ಗಾರ್ಡ್ ಮೌಂಟ್ ಎವರೆಸ್ಟ್ ಶಿಖರ ಏರಿ ಕನ್ನಡ ಧ್ವಜವನ್ನು ಹಾರಿಸಿದ್ದಾರೆ.
ನೆನ್ನೆ ಬೆಳಗ್ಗೆ ಮೌಂಟ್ ಎವರೆಸ್ಟ್ ಶಿಖರ ಹತ್ತಿ ಕನ್ನಡ ಬಾವುಟವನ್ನು ಹಾರಿಸಿದ್ದಾರೆ. ವನ್ಯಜೀವಿಗಳ ರಕ್ಷಣಾ ವರ್ಷ 2017 ರಲ್ಲಿ ವಿಕ್ರಮ್ ಈ ಸಾಹಸಕ್ಕೆ ಮುಂದಾಗಿದ್ದರು. ವಿಕ್ರಮ್ ಸಿ ಮೂಲತಃ ದಾವಣಗೆರೆ ಜಿಲ್ಲೆಯ ಹೊನ್ನಹಳ್ಳಿ ತಾ. ನಿವಾಸಿ. ಈಗ ವೀರನಹೊಸಹಳ್ಳಿ ಅರಣ್ಯ ರಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. 2015ರಲ್ಲಿ ಅರಣ್ಯ ರಕ್ಷಕ ಸಿಬ್ಬಂದಿಯಾಗಿ ಆಯ್ಕೆಯಾಗಿದ್ದಾರೆ.
ವಿಕ್ರಮ್ ಮೊದಲಿನಿಂದಲೂ ಕ್ರೀಡಾರಂಗದಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳುತ್ತಿದ್ದ. ಕಳೆದ ವರ್ಷ 50 ಕಿ.ಮೀ ಓಟದಲ್ಲಿ ಭಾಗವಹಿಸಿ ಯಶಸ್ವಿಯಾಗಿದ್ದ. ಮೌಂಟ್ ಎವರೆಸ್ಟ್ ಏರಿ ಕನ್ನಡದ ಬಾವುಟ ಹಾರಿಸಿದ್ದು ನಮಗೆಲ್ಲಾ ಖುಷಿ ತಂದಿದೆ ಎಂದು ಅರಣ್ಯಾಧಿಕಾರಿಗಳು ಶ್ಲಾಘಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.