ಪ್ರಕಾಶ್​​ ರೈ ವಿರುದ್ಧ ಅವಹೇಳನಕಾರಿ ಪೋಸ್ಟ್​, ಸಂಸದ ಪ್ರತಾಪ್​ ಸಿಂಹ ಪೊಲೀಸ್ ವಶಕ್ಕೆ

Published : Mar 08, 2019, 02:23 PM ISTUpdated : Mar 08, 2019, 02:29 PM IST
ಪ್ರಕಾಶ್​​ ರೈ ವಿರುದ್ಧ ಅವಹೇಳನಕಾರಿ ಪೋಸ್ಟ್​, ಸಂಸದ ಪ್ರತಾಪ್​ ಸಿಂಹ ಪೊಲೀಸ್ ವಶಕ್ಕೆ

ಸಾರಾಂಶ

ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರನ್ನು ಕೋರ್ಟ್ ಕಸ್ಟಡಿಗೆ ಪಡೆದಿದೆ. ನಟ ಪ್ರಕಾಶ್ ರಾಜ್ ಅವರು ಸಂಸದರ ವಿರುದ್ಧ ಮಾನಷ್ಟ ಮೊಕದ್ದಮೆ ದಾಖಲು ಮಾಡಿದ್ದರು.

ಬೆಂಗಳೂರು, (ಮಾ.08): ನಟ ಪ್ರಕಾಶ್​ ರಾಜ್​ ಅವರ ವಿರುದ್ಧ ಅವಹೇಳನಕಾರಿ ಟ್ವೀಟ್​ ಮಾಡಿದ್ದ ಪ್ರಕರಣದಲ್ಲಿ ಮೈಸೂರು-ಕೊಡಗು ಸಂಸದ ಪ್ರತಾಪ್​ ಸಿಂಹ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 

ಅವಹೇಳನಕಾರಿ ಟ್ವೀಟ್​ಗೆ ಸಂಬಂಧಿಸಿದಂತೆ ನಟ ಪ್ರಕಾಶ್​ ರಾಜ್​ ಅವರು ಮೈಸೂರಿನ ನ್ಯಾಯಾಲಯದಲ್ಲಿ 1 ರೂ.ಗೆ ಮಾನನಷ್ಟ ಕೇಸು ದಾಖಲಿಸಿದ್ದರು. 

ಈ ಪ್ರಕರಣ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆಗೊಂಡಿತ್ತು. ಆದರೆ, ಸತತವಾಗಿ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಖುದ್ದು ನ್ಯಾಯಾಲಯಕ್ಕೆ ಹಾಜರಾಗಬೇಕೆಂದು ಫೆ.23ರಂದು ಜಾಮೀನು ರಹಿತ ವಾರಂಟ್​ ಜಾರಿ ಮಾಡಿತ್ತು. 

ಇಂದು (ಶುಕ್ರವಾರ) ಕೋರ್ಟ್ ಗೆ ಹಾಜರಾಗಿದ್ದ ಪ್ರತಾಪ್ ಸಿಂಹ  ಅವರನ್ನು ಕಸ್ಟಡಿಗೆ ಪಡೆದಿದೆ. ಪ್ರಕರಣವನ್ನು ಮತ್ತೊಮ್ಮೆ ವಿಚಾರಣೆಗೆ ಕೈಗೆತ್ತಿಕೊಳ್ಳುವರೆಗೆ ಅವರನ್ನು ಸುಪರ್ದಿಯಲ್ಲಿಟ್ಟುಕೊಳ್ಳುವಂತೆ ಕೋರ್ಟ್, ಪೊಲೀಸರಿಗೆ ಸೂಚಿಸಿದೆ. 

ಸಂಸದ ಪ್ರತಾಪ್ ಸಿಂಹ ಬಂಧನಕ್ಕೆ ವಾರೆಂಟ್​ ಜಾರಿ

ಪರ್ತಕರ್ತೆ ಗೌರಿ ಹತ್ಯೆ ಸಂಬಂಧ ರಾಜ್​ ಮತ್ತು ಪ್ರತಾಪ್​ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ವಾಗ್ವಾದ ನಡೆಯುತ್ತಿತ್ತು. ಈ ನಡುವೆ ಗೌರಿ ಹತ್ಯೆ ವಿಚಾರವಾಗಿ ಪ್ರಕಾಶ್​ ರಾಜ್​ ಪ್ರಧಾನಿಯನ್ನು ಟೀಕಿಸಿದ್ದರು. 

ಇದಕ್ಕೆ ಟ್ವಿಟರ್​ ಮೂಲಕ ತಿರುಗೇಟು ನೀಡಲು ಹೋಗಿದ್ದ ಸಂಸದ ಪ್ರತಾಪ್​ ಸಿಂಹ, ” ಮಗ ಮೃತಪಟ್ಟಿದ್ದರೂ ಡ್ಯಾನ್ಸರ್ ಹಿಂದೆ ಓಡಾಡಿದವರಿಗೆ ಪ್ರಧಾನಿ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ,” ಎಂದು ಟ್ವೀಟಿಸಿದ್ದರು. 

ಮಗನ ಸಾವನ್ನು ಅಣಕಿಸುವಂತೆ ಟೀಕಿಸಿರುವ ಪ್ರತಾಪ್​ಸಿಂಹ ಅವರಿಗೆ ವಿವರಣೆ ಕೇಳಿ ರಾಜ್​ ಲೀಗಲ್ ನೋಟಿಸ್ ನೀಡಿದ್ದರು. 

ಆದರೆ,ಅದಕ್ಕೆ ಸರಿಯಾಗಿ ಉತ್ತರಿಸದಿದ್ದರಿಂದ ರೈ ಅವರು ಕಳೆದ ವರ್ಷ ಫೆ.27ರಂದು ಮೈಸೂರಿನ ನಾಲ್ಕನೇ ಜೆಎಂಎಫ್ ನ್ಯಾಯಾಲಯದಲ್ಲಿ ಕೇವಲ ಒಂದು ರೂ. ಪರಿಹಾರ ನೀಡುವಂತೆ ಕೋರಿ ಪ್ರತಾಪ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಮೋದಿಯಿಂದ ಬದ್ಧತೆಯ ಕಾರ್ಯ: ಸಂಸದ ಬಿ.ವೈ.ರಾಘವೇಂದ್ರ
ಏರಿಕೆಯಾಗ್ತಿರೋ ಚಿನ್ನವನ್ನು ಲಾಭದಾಯಕವಾಗಿ ಹೇಗೆ ಖರೀದಿಸಬೇಕು? ತಜ್ಞರ ಸಲಹೆ