ಪಾರ್ಕ್​ ಜಾಗದಲ್ಲಿ ಪೊಲೀಸ್ ಕಮಿಷನರ್ ಕಚೇರಿ!

Published : Jan 16, 2017, 02:10 AM ISTUpdated : Apr 11, 2018, 12:51 PM IST
ಪಾರ್ಕ್​ ಜಾಗದಲ್ಲಿ ಪೊಲೀಸ್ ಕಮಿಷನರ್ ಕಚೇರಿ!

ಸಾರಾಂಶ

ನಜರಾಬಾದ್​​ನಲ್ಲಿ ಕಚೇರಿ ನಿರ್ಮಾಣ ಮಾಡಲು ನಗರಾಭಿವೃದ್ಧಿ ಇಲಾಖೆ ಅನುಮತಿಯನ್ನೂ ಕೊಟ್ಟಿಲ್ಲ. ಆದರೂ ಸಿಎಂ ಸಿದ್ದರಾಮಯ್ಯನವರು ಅಡಿಗಲ್ಲಿಟ್ಟು ಕಚೇರಿ ನಿರ್ಮಾಣಕ್ಕೆ ಮುಂದಾಗಿದ್ದಾರೆ.

ಮೈಸೂರು (ಜ.15): ಮೈಸೂರಲ್ಲಿ ಸಾರ್ವಜನಿಕರ ಉಪಯೋಗಕ್ಕಿದ್ದ ಪಾರ್ಕ್ ಜಾಗದಲ್ಲಿ  ಪೊಲೀಸ್​ ಕಮೀಷನರ್​ ಕಚೇರಿ ತಲೆಎತ್ತುತ್ತಿದ್ದು  ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ನಜರಾಬಾದ್​​ನಲ್ಲಿ ಕಚೇರಿ ನಿರ್ಮಾಣ ಮಾಡಲು ನಗರಾಭಿವೃದ್ಧಿ ಇಲಾಖೆ ಅನುಮತಿಯನ್ನೂ ಕೊಟ್ಟಿಲ್ಲ. ಆದರೂ ಸಿಎಂ ಸಿದ್ದರಾಮಯ್ಯನವರು ಅಡಿಗಲ್ಲಿಟ್ಟು ಕಚೇರಿ ನಿರ್ಮಾಣಕ್ಕೆ ಮುಂದಾಗಿದ್ದಾರೆ.

ಇದು   ನಜರಾಬಾದ್​​ ನಿವಾಸಿಗಳ ವಿರೋಧಕ್ಕೆ ಕಾರಣವಾಗಿದೆ. ಕಾನೂನು ಗಾಳಿಗೆ ತೂರಿ ಪಾರ್ಕ್​​ ಜಾಗದಲ್ಲಿ ಕಚೇರಿ ನಿರ್ಮಾಣವಾಗುತ್ತಿರುವುದನ್ನು ಪ್ರಶ್ನಿಸಿ ಅಶೋಕ್​ ಕುಮಾರ್​ ಹೈಕೋರ್ಟ್​​​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

ಬಳಿಕ ಹೈಕೋರ್ಟ್​ 2016ರ ಅಕ್ಟೋಬರ್​ನಲ್ಲಿ ಕಟ್ಟಡ ನಿರ್ಮಾಣಕ್ಕೆ ತಡೆ ನೀಡಿದೆ. ಅದಾಗ್ಯೂ ಕಾಮಗಾರಿ ನಡೆಯುತ್ತಲೇ ಇದೆ ಎಂದು ಸ್ಥಳೀಯರು ದೂರಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಲಲಿತಮ್ಮ
ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?