
ಮೈಸೂರು: ಮೈಸೂರು ರಾಜವಂಶಸ್ಥರಲ್ಲಿ ಇದೀಗ ಸಂತಸ ಮೂಡಿದೆ. ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ತ್ರಿಷಿಕಾ ಕುಮಾರಿ ದಂಪತಿಗೆ ಮಕ್ಕಳಾಗುವ ಸಂದರ್ಭ ಕೂಡಿ ಬಂದಿದೆ.
ಯದುವೀರ ಅವರು ಪ್ರಮೋದಾದೇವಿ ಒಡೆಯರ್ ಅವರ ದತ್ತುಪುತ್ರ. ಅವರ ಪತ್ನಿ ತ್ರಿಷಿಕಾ ಗರ್ಭ ಧರಿಸಿರುವುದು ಕುಟುಂಬದಲ್ಲಿ ಸಂತಸ ಮೂಡಿಸಿದೆ.
ಜನಪದ ಕಥೆಯೊಂದರ ಪ್ರಕಾರ, ಶ್ರೀರಂಗಪಟ್ಟಣದ ರಾಜ ಶ್ರೀರಂಗರಾಯನ ಪತ್ನಿ ಅಲಮೇಲಮ್ಮನ ಶಾಪದಿಂದಾಗಿ ಒಡೆಯರ್ ವಂಶದ ಅರಸರಿಗೆ ಮಕ್ಕಳಾಗುತ್ತಿರಲಿಲ್ಲ ಎಂಬ ಪ್ರತೀತಿ ಇದೆ. ಈಗ ಕುಟುಂಬದವರು ಮಕ್ಕಳ ಭಾಗ್ಯ ಕಾಣುವಂತಾಗಿದೆ.
ತ್ರಿಷಿಕಾ ಕುಮಾರಿ ಈಗ 4 ತಿಂಗಳ ಗರ್ಭಿಣಿಯಾಗಿದ್ದು ದಸರಾ ವೇಳೆಗೆ ಅರಮನೆಗೆ ಹೊಸ ಅತಿಥಿಯ ಆಗಮನವಾಗಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.