
ಮೈಸೂರು(ಮೇ 09): ಎಚ್.ಡಿ.ಕೋಟೆ ತಾಲೂಕಿನ ಎನ್.ಬೆಳತ್ತೂರು ಗ್ರಾಮಕ್ಕೆ ಅತ್ಯುತ್ತಮ ಪರಿಸರ ಸ್ನೇಹಿ ಗ್ರಾಮಪಂಚಾಯಿತಿ ಪ್ರಶಸ್ತಿ ಸಿಕ್ಕಿದೆ. ಇಂದು ನಡೆದ ಸಮಾರಂಭದಲ್ಲಿ ನಟ ಪ್ರಕಾಶ್ ರೈ ಅವರು ಬೆಳತ್ತೂರು ಗ್ರಾಮದ ಮುಖಂಡರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ನಟಿ ಕಾರುಣ್ಯ ರಾಮ್, ಅರಣ್ಯಾಧಿಕಾರಿಗಳು ಮತ್ತಿತರರು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು. ವನ್ಯಸಂಪತ್ತಿನ ಬಗ್ಗೆ ಗ್ರಾಮಸ್ಥರಿಗಿರುವ ಕಾಳಜಿಯನ್ನು ಪ್ರಶಂಸಿಸಲಾಯಿತು.
ವನ್ಯಜೀವಿ ಸಂರಕ್ಷಣೆಯ ಅಭಿಯಾನ ಕೈಗೊಂಡಿರುವ ಸುವರ್ಣನ್ಯೂಸ್ ಮತ್ತು ಕನ್ನಡಪ್ರಭ ಸಂಸ್ಥೆಗಳು ಅರಣ್ಯ ಇಲಾಖೆ ಸಹಯೋಗದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಿದವು. ಸುದೀರ್ಘ ಕಾಲ ನಡೆಯುವ ಈ ಅಭಿಯಾನದಲ್ಲಿ ಪ್ರಕಾಶ್ ರೈ ಅವರು ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.