ವನ್ಯಜೀವಿ ಸಂರಕ್ಷಣೆಯ ಅಭಿಯಾನ ಕೈಗೊಂಡಿರುವ ಸುವರ್ಣನ್ಯೂಸ್ ಮತ್ತು ಕನ್ನಡಪ್ರಭ ಸಂಸ್ಥೆಗಳು ಅರಣ್ಯ ಇಲಾಖೆ ಸಹಯೋಗದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಿದವು. ಸುದೀರ್ಘ ಕಾಲ ನಡೆಯುವ ಈ ಅಭಿಯಾನದಲ್ಲಿ ಪ್ರಕಾಶ್ ರೈ ಅವರು ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ.
ಮೈಸೂರು(ಮೇ 09): ಎಚ್.ಡಿ.ಕೋಟೆ ತಾಲೂಕಿನ ಎನ್.ಬೆಳತ್ತೂರು ಗ್ರಾಮಕ್ಕೆ ಅತ್ಯುತ್ತಮ ಪರಿಸರ ಸ್ನೇಹಿ ಗ್ರಾಮಪಂಚಾಯಿತಿ ಪ್ರಶಸ್ತಿ ಸಿಕ್ಕಿದೆ. ಇಂದು ನಡೆದ ಸಮಾರಂಭದಲ್ಲಿ ನಟ ಪ್ರಕಾಶ್ ರೈ ಅವರು ಬೆಳತ್ತೂರು ಗ್ರಾಮದ ಮುಖಂಡರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ನಟಿ ಕಾರುಣ್ಯ ರಾಮ್, ಅರಣ್ಯಾಧಿಕಾರಿಗಳು ಮತ್ತಿತರರು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು. ವನ್ಯಸಂಪತ್ತಿನ ಬಗ್ಗೆ ಗ್ರಾಮಸ್ಥರಿಗಿರುವ ಕಾಳಜಿಯನ್ನು ಪ್ರಶಂಸಿಸಲಾಯಿತು.
ವನ್ಯಜೀವಿ ಸಂರಕ್ಷಣೆಯ ಅಭಿಯಾನ ಕೈಗೊಂಡಿರುವ ಸುವರ್ಣನ್ಯೂಸ್ ಮತ್ತು ಕನ್ನಡಪ್ರಭ ಸಂಸ್ಥೆಗಳು ಅರಣ್ಯ ಇಲಾಖೆ ಸಹಯೋಗದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಿದವು. ಸುದೀರ್ಘ ಕಾಲ ನಡೆಯುವ ಈ ಅಭಿಯಾನದಲ್ಲಿ ಪ್ರಕಾಶ್ ರೈ ಅವರು ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ.