
ಕೊಪ್ಪಳ: ಕಾಂಗ್ರೆಸ್ ಮಾಜಿ ಶಾಸಕ, ಕುರುಬ ಸಮಾಜದ ಪ್ರಭಾವಿ ನಾಯಕ ನಾಗಪ್ಪ ಸಾಲೋಣಿ ಅವರು ಬುಧವಾರ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಅಪಾರ ಬೆಂಬಲಿಗರೊಂದಿಗೆ ಬೆಂಗಳೂರಿನಲ್ಲಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.
ಕಳೆದ ಚುನಾವಣೆಯಲ್ಲಿ ಶಾಸಕ ಶಿವರಾಜ ತಂಗಡಗಿ ಗೆಲುವಿಗೆ ಟೊಂಕಕಟ್ಟಿನಿಂತಿದ್ದ ನಾಗಪ್ಪ ಸಾಲೋಣಿ ಅವರು, ಕಮಲ ಪಾಳಯಕ್ಕೆ ಆಗಮಿಸುತ್ತಿರುವುದು ಪಕ್ಷಕ್ಕೆ ಹೊಸ ಬಲ ನೀಡಿದೆ. ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ಸ್ವಜನ ಪಕ್ಷಪಾತ, ಗುಂಪುಗಾರಿಕೆ ಹಾಗೂ ಹಲವಾರು ಅನಾವಶ್ಯಕ ಬೆಳವಣಿಗಳಿಂದ ಬೇಸತ್ತು ಯಾವುದೇ ಷರತ್ತುಗಳಿಲ್ಲದೆ, ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ.
ಸಂಗಣ್ಣ ಕರಡಿ ಅವರ ನಾಯಕತ್ವದಲ್ಲಿ ವಿಶ್ವಾಸ ಇಟ್ಟು ಸಾಲೋಣಿ ನಾಗಪ್ಪ ಅವರು ಬಿಜೆಪಿ ಸೇರಲು ಮನಸ್ಸು ಮಾಡಿದ್ದಾರೆ ಎಂದು ಅವರ ಬೆಂಬಲಿಗರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.