ಜಾಮೀನಿಗಾಗಿ ನಾಗ ಅರ್ಜಿ

Published : Sep 15, 2017, 04:49 PM ISTUpdated : Apr 11, 2018, 12:51 PM IST
ಜಾಮೀನಿಗಾಗಿ ನಾಗ ಅರ್ಜಿ

ಸಾರಾಂಶ

ಅಮಾನ್ಯಗೊಂಡ 500 ಮತ್ತು 1000 ರೂಪಾಯಿ ಮುಖಬೆಲೆಯ ನೋಟುಗಳನ್ನು ಅಕ್ರಮವಾಗಿ ಬದಲಿಸಿದ ಆರೋಪ ಸಂಬಂಧ ಪೊಲೀಸರು ದಾಖಲಿಸಿರುವ ಪ್ರತ್ಯೇಕ 7 ದೂರುಗಳ ಸಂಬಂಧ ಜಾಮೀನು ಮಂಜೂರು ಮಾಡಬೇಕೆಂದು ಕೋರಿ ಬಿಬಿಎಂಪಿ ಮಾಜಿ ಸದಸ್ಯ ವಿ. ನಾಗರಾಜು ಮತ್ತವರ ಇಬ್ಬರು ಪುತ್ರರಾದ ಗಾಂಧಿ ಮತ್ತು ಶಾಸ್ತ್ರಿ ಹೈಕೋರ್ಟ್’ಗೆ ಅರ್ಜಿ ಸಲ್ಲಿಸಿದ್ದಾರೆ.

ಬೆಂಗಳೂರು (ಸೆ.15): ಅಮಾನ್ಯಗೊಂಡ 500 ಮತ್ತು 1000 ರೂಪಾಯಿ ಮುಖಬೆಲೆಯ ನೋಟುಗಳನ್ನು ಅಕ್ರಮವಾಗಿ ಬದಲಿಸಿದ ಆರೋಪ ಸಂಬಂಧ ಪೊಲೀಸರು ದಾಖಲಿಸಿರುವ ಪ್ರತ್ಯೇಕ 7 ದೂರುಗಳ ಸಂಬಂಧ ಜಾಮೀನು ಮಂಜೂರು ಮಾಡಬೇಕೆಂದು ಕೋರಿ ಬಿಬಿಎಂಪಿ ಮಾಜಿ ಸದಸ್ಯ ವಿ. ನಾಗರಾಜು ಮತ್ತವರ ಇಬ್ಬರು ಪುತ್ರರಾದ ಗಾಂಧಿ ಮತ್ತು ಶಾಸ್ತ್ರಿ ಹೈಕೋರ್ಟ್’ಗೆ ಅರ್ಜಿ ಸಲ್ಲಿಸಿದ್ದಾರೆ.

7 ಪ್ರಕರಣಗಳ ಸಂಬಂಧ ನಗರ ಜಿಲ್ಲಾ ಸೆಷನ್ಸ್ ನ್ಯಾಯಾಲಯ ವಿ ನಾಗರಾಜು ಮತ್ತವರ ಪುತ್ರರಿಗೆ ಜಾಮೀನು ನಿರಾಕರಿಸಿತ್ತು. ಇದರಿಂದ ಜಾಮೀನು ಕೋರಿ ಹೈಕೋರ್ಟ್’ಗೆ 7 ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಈ ಅರ್ಜಿಗಳ ವಿಚಾರಣೆ ನ್ಯಾ. ರತ್ನಕಲಾ ಅವರಿದ್ದ ಏಕ ಸದಸ್ಯ ಪೀಠ ನಡೆಸಿತು. ಸೆ.21 ರಂದು ಅರ್ಜಿಗೆ ಆಕ್ಷೇಪಣೆ ಸಲ್ಲಿಸಬೇಕು. ಅರ್ಜಿದಾರರ ವಿರುದ್ಧ ಅಧೀನ ನ್ಯಾಯಾಲಯಕ್ಕೆ ಸಲ್ಲಿಸಿರುವ ದೋಷಾರೋಪ ಪಟ್ಟಿಯನ್ನು ಕೋರ್ಟ್’ಗೆ ಒದಗಿಸಲು ಸೂಚಿಸಿತು.  

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Aviva Baig Religion: ಮುಸ್ಲಿಂ ಹುಡುಗಿಯನ್ನು ಸೊಸೆ ಮಾಡಿಕೊಳ್ಳಲು ಮುಂದಾದ ಪ್ರಿಯಾಂಕಾ ಗಾಂಧಿ ವಾದ್ರಾ?
ಕೋಗಿಲು ಕ್ರಾಸ್‌ನಲ್ಲಿ ಮನೆ ಕಳೆದುಕೊಂಡವರ ಪೈಕಿ 20 ಮಂದಿ ಮಾತ್ರ ಹೊರಗಿನವರು: ಜಮೀರ್‌ ಅಹ್ಮದ್‌