ಬಡಿದಾಡ್ತಿದ್ದ ಅಧಿಕಾರಿಗಳಿಗೆ ಕಡ್ಡಾಯ ರಜೆ: ಸಿಬಿಐಗೆ ಹಂಗಾಮಿ ನಿರ್ದೇಶಕ!

Published : Oct 24, 2018, 12:20 PM IST
ಬಡಿದಾಡ್ತಿದ್ದ ಅಧಿಕಾರಿಗಳಿಗೆ ಕಡ್ಡಾಯ ರಜೆ: ಸಿಬಿಐಗೆ ಹಂಗಾಮಿ ನಿರ್ದೇಶಕ!

ಸಾರಾಂಶ

ದಿನಕ್ಕೊಂದು ತಿರುವು ಪಡೆಯುತ್ತಿರುವ ಸಿಬಿಐ ಅಂತರ್ಯುದ್ಧ! ಅಲೋಕ್ ವರ್ಮಾ, ರಾಕೇಶ್‌ ಆಸ್ಥಾನ ಅವರಿಗೆ ಕಡ್ಡಾಯ ರಜೆ! ಹಂಗಾಮಿ ನಿರ್ದೇಶಕರನ್ನಾಗಿ ಎಂ. ನಾಗೇಶ್ವರ್ ರಾವ್ ನೇಮಕ! ನಾಗೇಶ್ವರ್ ರಾವ್ ನೇಮಕ ಮಾಡಿ ಆದೇಶ ಹೊರಡಿಸಿದ ಪ್ರಧಾನಿ ಕಾರ್ಯಾಲಯ

ನವದೆಹಲಿ(ಅ.24): ದೇಶದ ಅತ್ಯುನ್ನತ ತನಿಖಾ ಸಂಸ್ಥೆ ಸಿಬಿಐ ಅಂತರ್ಯುದ್ಧ ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿದೆ. 

ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಹಾಗೂ ಸಿಬಿಐ ವಿಶೇಷ ನಿರ್ದೇಶಕ ರಾಕೇಶ್‌ ಆಸ್ಥಾನ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಲಾಗಿದೆ. 

ಇನ್ನು ಸಿಬಿಐನ ಹಂಗಾಮಿ ನಿರ್ದೇಶಕರನ್ನಾಗಿ ಎಂ ನಾಗೇಶ್ವರ್ ರಾವ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಕಾರ್ಯಾಲಯ ನೇಮಕ ಮಾಡಿದೆ.

ಪ್ರಧಾನಿ ನೇತೃತ್ವದ ನೇಮಕಾತಿ ಸಮಿತಿ ಎಂ. ನಾಗೇಶ್ವರ್ ರಾವ್ ರನ್ನು ಸಿಬಿಐನ ಹಂಗಾಮಿ ನಿರ್ದೇಶಕರಾಗಿ ನೇಮಕ ಮಾಡಿದ್ದು, ಅದರಂತೆ ಅಂತೆ ನಾಗೇಶ್ವರ ರಾವ್ ಅಧಿಕಾರ ಸ್ವೀಕರಿಸಿದ್ದಾರೆ. 

ಈ ಹಿಂದೆ ಅಲೋಕ್ ವರ್ಮಾ ವಿರುದ್ಧವೇ ಸುಮಾರು 10 ಪ್ರಕರಣಗಳಲ್ಲಿ ಹಲವರಿಂದ ಲಂಚ ಸ್ವೀಕರಿಸಿದ್ದಾರೆ ಎಂದು ರಾಕೇಶ್ ಆಸ್ತಾನ ಸಹ ಆರೋಪಿಸಿದ್ದರು. ಈ ಕುರಿತು ಸಂಪುಟ ಕಾರ್ಯದರ್ಶಿ ಹಾಗೂ ಕೇಂದ್ರ ಜಾಗೃತ ಆಯೋಗಕ್ಕೂ ಪತ್ರ ಬರೆದಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತೆರೆಮರೆಯ ಗುರು: ವಾರ್ಷಿಕೋತ್ಸವದ ವೇಳೆ ಮಕ್ಕಳು ಡಾನ್ಸ್ ಸ್ಟೆಪ್ ತಪ್ಪಿಸಬಾರದು ಎಂದು ಟೀಚರ್‌ ಏನ್ ಮಾಡಿದ್ರು ನೋಡಿ
Bengaluru: 70 ವರ್ಷದ ಪತಿಯ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ 67 ವರ್ಷದ ನಿವೃತ್ತ ಪ್ರಾಧ್ಯಾಪಕಿ!