ಸತತ ಬರಗಾಲದಿಂದ ತತ್ತರಿಸಿದ ಜಿಲ್ಲೆಯ ಜನತೆ ಈಗ ಮಳೆಗಾಗಿ ಬಾಲಕರನ್ನು ಬೆತ್ತಲೆ ಮೆರವಣಿಗೆ ನಡೆಸಿರುವ ಘಟನೆ ಹಾವೇರಿ ಜಿಲ್ಲೆಯ ಹಿರೇಕಬ್ಬಾರ ಗ್ರಾಮದಲ್ಲಿ ಬುಧವಾರ ನಡೆದಿದೆ.
ಹಿರೇಕೆರೂರು (ಜೂ.28): ಸತತ ಬರಗಾಲದಿಂದ ತತ್ತರಿಸಿದ ಜಿಲ್ಲೆಯ ಜನತೆ ಈಗ ಮಳೆಗಾಗಿ ಬಾಲಕರನ್ನು ಬೆತ್ತಲೆ ಮೆರವಣಿಗೆ ನಡೆಸಿರುವ ಘಟನೆ ಹಾವೇರಿ ಜಿಲ್ಲೆಯ ಹಿರೇಕಬ್ಬಾರ ಗ್ರಾಮದಲ್ಲಿ ಬುಧವಾರ ನಡೆದಿದೆ.
ಮಳೆಗಾಗಿ ವಿಶೇಷ ಪೂಜೆ ಸಲ್ಲಿಸುವ ಕಾರ್ಯಕ್ರಮದಲ್ಲಿ ಮೂವರು ಬಾಲಕರನ್ನು ಬೆತ್ತಲುಗೊಳಿಸಿ ತಲೆ ಮೇಲೆ ಮಣೆಯಲ್ಲಿ ಮಣ್ಣಿನ ಮೂರ್ತಿಯಿಟ್ಟು ಓಣಿಗಳಲ್ಲಿ ಮೆರವಣಿಗೆ ನಡೆಸಲಾಗಿದೆ. ಮಣ್ಣಿನ ಮೂರ್ತಿಗೆ ಗ್ರಾಮದವರು ಹೂವು ಹಾಕಿ, ಕರ್ಪೂರ, ಕಡ್ಡಿ ಹಚ್ಚಿ ಪೂಜೆ ಸಲ್ಲಿಸಿದ್ದಾರೆ. ಗ್ರಾಮದ ಮಹಿಳೆಯರು ಮಳೆಗಾಗಿ ಪ್ರಾರ್ಥಿಸಿ ಇದೇ ಸಂದರ್ಭದಲ್ಲಿ ದೇವಸ್ಥಾನದಲ್ಲಿ ಪೂಜೆ ನೆರವೇರಿಸಿದ್ದಾರೆ. ಮಳೆಯಿಲ್ಲದೇ ಕಳೆದ ಮೂರು ವರ್ಷಗಳಿಂದ ರೈತರು ಕಂಗೆಟ್ಟಿದ್ದಾರೆ. ಈ ಬಾರಿ ಇನ್ನೂ ಮಳೆಯಾಗದ್ದರಿಂದ ಬಿತ್ತನೆ ಮಾಡಿದ ಬೀಜವೂ ಹಾಳಾಗುತ್ತಿದೆ. ಮಕ್ಕಳನ್ನು ಬೆತ್ತಲೆ ಮೆರವಣಿಗೆ ಮಾಡಿದರೆ ಮಳೆಯಾಗುತ್ತದೆ ಎಂಬ ನಂಬಿಕೆಯಿದೆಯಾದ್ದರಿಂದ ಹೀಗೆ ಮಾಡಲಾಗಿದೆ ಎಂದು ಗ್ರಾಮಸ್ಥರು ಹೇಳುತ್ತಾರೆ.
ಆದರೆ ಗ್ರಾಮಸ್ಥರ ನಡೆಗೆ ಹಲವೆಡೆಯಿಂದ ಆಕ್ಷೇಪವೂ ವ್ಯಕ್ತವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.