ನಲಪಾಡ್’ಗೆ ಜೈಲಾ? ಬೇಲಾ? ಇಂದು ನಿರ್ಧಾರವಾಗುತ್ತೆ ಭವಿಷ್ಯ

Published : Mar 14, 2018, 07:39 AM ISTUpdated : Apr 11, 2018, 12:56 PM IST
ನಲಪಾಡ್’ಗೆ ಜೈಲಾ? ಬೇಲಾ? ಇಂದು ನಿರ್ಧಾರವಾಗುತ್ತೆ ಭವಿಷ್ಯ

ಸಾರಾಂಶ

ಫರ್ಜಿ ಕೆಫೆಯಲ್ಲಿ ಗೂಂಡಾಗಿರಿ ನಡೆಸಿ ಜೈಲು ಸೇರಿರುವ ನಲಪಾಡ್​ ಹ್ಯಾರಿಸ್​ಗೆ ಇಂದು ನಿರ್ಣಾಯಕ ದಿನ. ಜಾಮೀನು ನೀಡಲು ನಿರಾಕರಿಸಿದ್ದ ಸೆಷನ್ಸ್​​ ಕೋರ್ಟ್​​ ಆದೇಶ ಪ್ರಶ್ನಿಸಿ ಹೈಕೋರ್ಟ್​ ಸಲ್ಲಿಸಿದ್ದ ಅರ್ಜಿಯ ಆದೇಶ ಇಂದು ಪ್ರಕಟವಾಗಲಿದೆ.

ಬೆಂಗಳೂರು (ಮಾ. 14):  ಫರ್ಜಿ ಕೆಫೆಯಲ್ಲಿ ಗೂಂಡಾಗಿರಿ ನಡೆಸಿ ಜೈಲು ಸೇರಿರುವ ನಲಪಾಡ್​ ಹ್ಯಾರಿಸ್​ಗೆ ಇಂದು ನಿರ್ಣಾಯಕ ದಿನ. ಜಾಮೀನು ನೀಡಲು ನಿರಾಕರಿಸಿದ್ದ ಸೆಷನ್ಸ್​​ ಕೋರ್ಟ್​​ ಆದೇಶ ಪ್ರಶ್ನಿಸಿ ಹೈಕೋರ್ಟ್​ ಸಲ್ಲಿಸಿದ್ದ ಅರ್ಜಿಯ ಆದೇಶ ಇಂದು ಪ್ರಕಟವಾಗಲಿದೆ.

ನಲಪಾಡ್​ ಪರ ವಾದ ಮಂಡಿಸಿದ್ದ ಹಿರಿಯ ವಕೀಲ ಸಿ.ವಿ.ನಾಗೇಶ್, ನಲಪಾಡ್​ ಹಲ್ಲೆ ನಡೆಸಿಲ್ಲ. ಗಲಾಟೆಯೂ ಕೂಡ ಉದ್ದೇಶಪೂರ್ವಕವಾಗಿ ನಡೆದಿಲ್ಲ. ತನಿಖೆ ಸಂಪೂರ್ಣವಾಗಿ ಮುಕ್ತಾಯವಾಗಿದ್ದು ಜಾಮೀನು ನೀಡುವಂತೆ ಮನವಿ ಮಾಡಿದ್ದಾರೆ. ಆದರೆ, ಎಸ್​ಪಿಪಿ ಶ್ಯಾಮಸುಂದರ್ ವಾದ ಮಂಡಿಸಿ, ನಲಪಾಡ್​ ಘನಘೋರವಾಗಿ ಹಲ್ಲೆ ​​ನಡೆಸಿದ್ದಾನೆ. ಆರೋಪಿ ಪ್ರಭಾವಿಯಾಗಿದ್ದು, ಜಾಮೀನು ಸಿಕ್ಕರೆ ತನಿಖೆಗೆ ತೊಂದರೆಯಾಗುತ್ತದೆ. ಗಾಯಾಳು ವಿದ್ವತ್​ ಕೂಡ ಇನ್ನೂ ಚೇತರಿಸಿಕೊಂಡಿಲ್ಲ. ಹೀಗಾಗಿ ಜಾಮೀನು ನೀಡದಂತೆ ಮನವಿ ಮಾಡಿದ್ದಾರೆ. ವಾದ ಪ್ರತಿವಾದ ಆಲಿಸಿರುವ ನ್ಯಾಯಪೀಠ ಇಂದು ಮಧ್ಯಾಹ್ನ 2.30ಕ್ಕೆ ಆದೇಶ ಪ್ರಕಟಿಸಲಿದೆ. ಈಗಾಗಲೇ ನಲಪಾಡ್​ 24 ದಿನಗಳ ಕಾಲ ಕಂಬಿ ಎಣಿಸಿದ್ದು, ಜಾಮೀನು ಸಿಗುತ್ತಾ..? ಅಥವಾ ಜೈಲು ವಾಸ ಮುಂದುವರೆಯುತ್ತಾ ಅನ್ನೋ ಪ್ರಶ್ನೆಗೆ ಉತ್ತರ ಸಿಗಲಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಾ ಜಿ ಪರಮೇಶ್ವರ ರಾಜ್ಯದ ಸಿಎಂ ಆಗಬೇಕು, ರಾಜಕೀಯದಲ್ಲಿ ಸಂಚಲನ ಮೂಡಿಸೋ ಹೇಳಿಕೆ ಕೊಟ್ಟ ಕೇಂದ್ರ ಸಚಿವ ವಿ. ಸೋಮಣ್ಣ!
ಕೇರಳದ ಮೊದಲ ಜೆನ್‌ಝಿ ಪೋಸ್ಟ್ ಆಫೀಸ್ ಆರಂಭ, ಟ್ರೆಂಡಿ ಕಚೇರಿಗೆ ಮನಸೋತ ಯುವ ಸಮೂಹ