
ಕೊಪ್ಪಳ (ಜ.16): ಗಣಿ ಹಗರಣದಲ್ಲಿ ಮೂರು ಪಕ್ಷಗಳ ಮುಖ್ಯಮಂತ್ರಿಗಳ ಹೆಸರು ಇದೆ ಎಂದು ನಿವೃತ್ತ ಲೋಕಾಯುಕ್ತ ನ್ಯಾ| ಸಂತೋಷ್ಹೆಗ್ಡೆ ಮಾಹಿತಿ ಹೊರಹಾಕಿದ್ದಾರೆ.
ಕೊಪ್ಪಳದಲ್ಲಿ ಈ ಮಾಹಿತಿ ಹೊರಹಾಕಿರುವ ಸಂತೋಷ್ ಹೆಗ್ಡೆ ನಾನು ನೀಡಿರುವ ಗಣಿ ಹಗರಣದ ಬಗೆಗಿನ ವರದಿ ಧೂಳು ತಿನ್ನುತ್ತಿದೆ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.
ಈ ವರದಿಯನ್ನು ಜಾರಿಗೆ ಮಾಡಬೇಕಾದವರು ಹಿಂದೇಟು ಹಾಕುತ್ತಿದ್ದಾರೆ ಎಂದು ಅವರು ಲೇವಡಿ ಮಾಡಿದ್ದಾರೆ.
ಲೋಕಾಯುಕ್ತ ಸಂಸ್ಥೆ ಸಾಮಾನ್ಯ ಜನರಿಗೆ ನ್ಯಾಯಕೊಡಿಸುವ ಸಂಸ್ಥೆಯಾಗಿತ್ತು. ಆದರೆ ಸರ್ಕಾರ ಎಸಿಬಿ ರಚನೆ ಮಾಡುವ ಮೂಲಕ ಅದರ ಅಧಿಕಾರಗಳನ್ನು ಕಿತ್ತುಕೊಂಡಿದೆ.
ಎಸಿಬಿ ರಚನೆ ಮಾಡುವ ಮೂಲಕ ಸರ್ಕಾರ ಲೋಕಾಯುಕ್ತವನ್ನು ಹಲ್ಲುಕಿತ್ತ ಹಾವಿನಂತೆ ಮಾಡಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.