ಮೆಟ್ರೋ ಪುನಾರಂಭ; ಸರಕಾರದ ಎಸ್ಮಾ ಬೆದರಿಕೆ; ಮೆಟ್ರೋ ಸಿಬ್ಬಂದಿ ಮುಷ್ಕರ ವಾಪಸ್

Published : Jul 07, 2017, 12:43 PM ISTUpdated : Apr 11, 2018, 12:45 PM IST
ಮೆಟ್ರೋ ಪುನಾರಂಭ; ಸರಕಾರದ ಎಸ್ಮಾ ಬೆದರಿಕೆ; ಮೆಟ್ರೋ ಸಿಬ್ಬಂದಿ ಮುಷ್ಕರ ವಾಪಸ್

ಸಾರಾಂಶ

ಇಂದು ಬೆಳಗ್ಗೆಯಿಂದಲೂ ನಗರದಲ್ಲಿ ಮೆಟ್ರೋ ಸಂಚಾರ ಸ್ಥಗಿತಗೊಂಡಿತ್ತು. ರೈಲು ಸಂಚಾರ ನಿಲ್ಲಿಸಿದ ಬಿಎಂಆರ್'ಸಿಎಲ್ ಸಿಬ್ಬಂದಿ ವಿರುದ್ಧ ಗರಂ ಆದ ರಾಜ್ಯ ಸರಕಾರ ಎಸ್ಮಾ ಕಾಯ್ದೆ ಜಾರಿಗೆ ತರಲು ಚಿಂತನೆಯನ್ನೂ ನಡೆಸಿತ್ತು.

ಬೆಂಗಳೂರು(ಜುಲೈ 07): ಇಂದು ಸ್ಥಗಿತಗೊಂಡಿದ್ದ ನಗರದ ಮೆಟ್ರೋ ರೈಲು ಮತ್ತೆ ಸಂಚಾರ ಆರಂಭಿಸಲಿದೆ. ಮೆಟ್ರೋ ಸಿಬ್ಬಂದಿ ತಮ್ಮ ಪ್ರತಿಭಟನೆಯನ್ನು ವಾಪಸ್ ಪಡೆಯಲು ನಿರ್ಧರಿಸಿದ ಹಿನ್ನೆಲೆಯಲ್ಲಿ ಮೆಟ್ರೋ ಸಂಚಾರ ಮತ್ತೆ ಆರಂಭವಾಗಿದೆ. ನಿನ್ನೆ ಪೊಲೀಸ್ ಮತ್ತು ಮೆಟ್ರೋ ಸಿಬ್ಬಂದಿ ಮಾರಾಮಾರಿ ನಡೆದ ಹಿನ್ನೆಲೆಯಲ್ಲಿ ಇಂದು ಮೆಟ್ರೋ ಸಿಬ್ಬಂದಿ ಮುಷ್ಕರ ನಡೆಸಲು ನಿರ್ಧರಿಸಿದ್ದರು.

ಇಂದು ಬೆಳಗ್ಗೆಯಿಂದಲೂ ನಗರದಲ್ಲಿ ಮೆಟ್ರೋ ಸಂಚಾರ ಸ್ಥಗಿತಗೊಂಡಿತ್ತು. ರೈಲು ಸಂಚಾರ ನಿಲ್ಲಿಸಿದ ಬಿಎಂಆರ್'ಸಿಎಲ್ ಸಿಬ್ಬಂದಿ ವಿರುದ್ಧ ಗರಂ ಆದ ರಾಜ್ಯ ಸರಕಾರ ಎಸ್ಮಾ ಕಾಯ್ದೆ ಜಾರಿಗೆ ತರಲು ಚಿಂತನೆಯನ್ನೂ ನಡೆಸಿತ್ತು. ಈ ಸಂಬಂಧ ಬಿಎಂಆರ್'ಸಿಎಲ್ ಸಿಬ್ಬಂದಿ ಜೊತೆ ಸರಕಾರ ಸಂಧಾನ ಸಭೆಯನ್ನೂ ನಡೆಸಿತು. ಸಂಧಾನಕ್ಕೆ ಮೆಟ್ರೋ ಸಿಬ್ಬಂದಿ ಬಗ್ಗದಿದ್ದರೆ ಎಸ್ಮಾ ಕಾಯ್ದೆ ಜಾರಿಗೊಳಿಸಲು ಸರಕಾರ ನಿರ್ಧರಿಸಿತ್ತು. ಆದರೆ, ಬಿಎಂಆರ್'ಸಿಎಲ್ ತಮ್ಮ ಪ್ರತಿಭಟನೆಯನ್ನು ಹಿಂಪಡೆಯಲು ನಿರ್ಧರಿಸಿದ್ದಾರೆ. ಇದರೊಂದಿಗೆ ಕೆಲವಾರು ಗಂಟೆ ಕಾಲ ಸ್ಥಗಿತಗೊಂಡಿದ್ದ ಮೆಟ್ರೋ ಸಂಚಾರ ಮತ್ತೆ ಆರಂಭವಾಗಿ ಬೆಂಗಳೂರಿಗರು ನಿಟ್ಟುಸಿರು ಬಿಡುವಂತಾಗಿದೆ.

ಮೆಟ್ರೋ ಗಲಾಟೆ ಯಾಕೆ?
ನಿನ್ನೆ ಸೆಂಟ್ರಲ್ ಕಾಲೇಜು ಮೆಟ್ರೋ ಸ್ಟೇಷನ್'ನಲ್ಲಿ ಸಿಬ್ಬಂದಿ ಮೇಲೆ ಪೊಲೀಸರು ಹಲ್ಲೆ ಮಾಡಿದ್ದರು. ಆ ಬಳಿಕ ಬಿಎಂಆರ್'ಸಿಎಲ್ ಸಿಬ್ಬಂದಿ ಕೂಡ ಪೊಲೀಸರ ಮೇಲೆ ಪ್ರತಿದಾಳಿ ನಡೆಸಿದ್ದರು. ನಿಂತಿದ್ದ ಎಲಿವೇಟರ್'ನಲ್ಲಿ ಮೆಟ್ಟಲು ಹತ್ತಿಕೊಂಡು ಹೋಗುತ್ತಿದ್ದ ಪೊಲೀಸರನ್ನು ಮೆಟ್ರೋ ಸಿಬ್ಬಂದಿ ತಡೆದದ್ದು ಈ ಘಟನೆಗೆ ಕಾರಣವಾಗಿತ್ತು. ಈ ಪ್ರಕರಣದಲ್ಲಿ ಇಬ್ಬರು ಪೊಲೀಸರು ಹಾಗೂ ಆರು ಮೆಟ್ರೋ ಸಿಬ್ಬಂದಿಯನ್ನು ಬಂಧಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೊಲ್ಲೂರು ದೇವಳ ಹೆಸರಲ್ಲಿ ನಕಲಿ ವೆಬ್‌ಸೈಟ್: ಭಕ್ತರಿಗೆ ವಂಚಿಸುತ್ತಿದ್ದ ಆರೋಪಿ ನಾಸೀರ್ ಹುಸೇನ್ ಬಂಧನ
ಬಂಗಾಳದಲ್ಲಿ ಶೀಘ್ರ ಜಂಗಲ್‌ ರಾಜ್ಯ ಅಂತ್ಯ : ಮೋದಿ ಪಣ