ಸಿಎಂ ತಲೆನೋವು ತಂದ ನಂಜನಗೂಡು ಉಪಚುನಾವಣೆ

Published : Jan 20, 2017, 06:47 AM ISTUpdated : Apr 11, 2018, 01:03 PM IST
ಸಿಎಂ ತಲೆನೋವು ತಂದ ನಂಜನಗೂಡು ಉಪಚುನಾವಣೆ

ಸಾರಾಂಶ

ನಂಜನಗೂಡು ಉಪ ಚುನಾವಣೆ ಸಿಎಂ ಸಿದ್ದರಾಮಯ್ಯರನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಲೋಕೋಪಯೋಗಿ ಸಚಿವ ಎಚ್. ಸಿ. ಮಹದೇವಪ್ಪರನ್ನು ಕಣಕ್ಕಿಳಿಸಲು ಸಿಎಂ ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ. ಶ್ರೀನಿವಾಸ್ ಪ್ರಸಾದ್ ಗೆ ಪ್ರಬಲ ಪ್ರತಿಸ್ಪರ್ಧಿ ಅಭ್ಯರ್ಥಿ ಸಿಗದ ಹಿನ್ನೆಲೆಯಲ್ಲಿ ಮಹದೇವಪ್ಪರನ್ನು ನಿಲ್ಲಿಸಲು ಸಿದ್ದರಾಮಯ್ಯ ನಿರ್ಧರಿಸಿದ್ದಾರೆ ಅಂತ ಮೂಲಗಳು ತಿಳಿಸಿವೆ.

ಮೈಸೂರು(ಜ.20): ನಂಜನಗೂಡು ಉಪ ಚುನಾವಣೆ ಸಿಎಂ ಸಿದ್ದರಾಮಯ್ಯರನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಲೋಕೋಪಯೋಗಿ ಸಚಿವ ಎಚ್. ಸಿ. ಮಹದೇವಪ್ಪರನ್ನು ಕಣಕ್ಕಿಳಿಸಲು ಸಿಎಂ ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ. ಶ್ರೀನಿವಾಸ್ ಪ್ರಸಾದ್ ಗೆ ಪ್ರಬಲ ಪ್ರತಿಸ್ಪರ್ಧಿ ಅಭ್ಯರ್ಥಿ ಸಿಗದ ಹಿನ್ನೆಲೆಯಲ್ಲಿ ಮಹದೇವಪ್ಪರನ್ನು ನಿಲ್ಲಿಸಲು ಸಿದ್ದರಾಮಯ್ಯ ನಿರ್ಧರಿಸಿದ್ದಾರೆ ಅಂತ ಮೂಲಗಳು ತಿಳಿಸಿವೆ.

ಈ ಬಗ್ಗೆ ಹೈಕಮಾಂಡ್​​ಗೆ ಮಹದೇವಪ್ಪರನ್ನೇ ನಿಲ್ಲಿಸಲು ಅವಕಾಶ ನೀಡುವಂತೆ ಒತ್ತಡ ಹೇರಲು ತೀರ್ಮಾನಿಸಿದ್ದಾರೆ. ನಂಜನಗೂಡಿನಲ್ಲಿ ಮಹದೇವಪ್ಪ ಗೆದ್ದರೆ, ಟಿ ನರಸಿಪುರ ಕ್ಷೇತ್ರಕ್ಕೆ ರಾಜೀನಾಮೆ ನೀಡಲು 6 ತಿಂಗಳ ಕಾಲಾವಕಾಶ ಇರುತ್ತದೆ, ಆಗ ಉಪ ಚುನಾವಣೆ ನಡೆಯುವುದು ಸಾಧ್ಯತೆ ಕಡಿಮೆ ಎಂಬ ಲೆಕ್ಕಾಚಾರ ಸಿಎಂ ಸಿದ್ದರಾಮಯ್ಯರದ್ದು. ಹೀಗಾಗಿ ಮಹದೇವಪ್ಪ ಅವರನ್ನೇ  ಅಭ್ಯರ್ಥಿ ಮಾಡಬೇಕೆಂದು ಸಿಎಂ ಹೈಕಮಾಂಡ್​​ ಮುಂದೆ ಪಟ್ಟು ಹಿಡಿದಿದ್ದಾರೆ ಅಂತ ಗೊತ್ತಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಬಡ್ಡಿ ಟೂರ್ನಿ ವೇಳೆಯಲ್ಲೇ ಪ್ಲೇಯರ್‌ ರಾಣಾ ಬಲ್ಚೌರಿಯಾ ಕೊ*ಲೆ!
ಅತ್ಯಂತ ಕಡಿಮೆ ಬೆಲೆಯ ಹ್ಯಾಪಿ ನ್ಯೂ ಇಯರ್‌ ಪ್ಲ್ಯಾನ್‌ ರಿಲೀಸ್‌ ಮಾಡಿದ ಜಿಯೋ!