
ಮೈಸೂರು(ಎ.07): ಮೈಸೂರು ಜಿಲ್ಲೆಯ ನಂಜನಗೂಡಿನ ಆರಾಧ್ಯದೈವ ಶ್ರೀ ನಂಜುಂಡೇಶ್ವರನ ರಥೋತ್ಸವದ ವೇಳೆ ಅವಘಡ ಸಂಭವಿಸಿದೆ. ಪ್ರಸಿದ್ಧ ಶ್ರೀಕಂಠಸ್ವಾಮಿ ರಥೋತ್ಸವದ ವೇಳೆ ರಥದ ಚಕ್ರ ಮಣ್ಣಿನ ಹೂಳಿನಲ್ಲಿ ಸಿಲುಕಿಕೊಂಡಿದೆ.
ನಂಜನಗೂಡಿನ ಅಂಗಡಿ ಬೀದಿಯಲ್ಲಿ ಈ ಅವಘಡ ಸಂಭವಿಸಿದ್ದು, ಜೆಸಿಬಿ ಹಾಗೂ ಕ್ರೇನ್ ಮೂಲಕ ರಥವನ್ನು ಮೇಲೆತ್ತುವ ಕಾರ್ಯ ಮಾಡಲಾಗ್ತಿದೆ. ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ರಥ ಸಾಗುವ ಹಾದಿಯಲ್ಲಿ ಮಣ್ಣು ಸಡಿಲಗೊಂಡ ಕಾರಣ, ಬೃಹತ್ ರಥ ಮಣ್ಣಿನ ಹೂಳಿನಲ್ಲಿ ಸಿಲುಕಿಕೊಂಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.