ನಂಜನಗೂಡಿನಲ್ಲಿ ಶ್ರೀನಿವಾಸಪ್ರಸಾದ್'ಗೆ ಹೀನಾಯ ಸೋಲು; ಕಳಲೆ ಜಯಭೇರಿ

Published : Apr 13, 2017, 07:58 AM ISTUpdated : Apr 11, 2018, 12:55 PM IST
ನಂಜನಗೂಡಿನಲ್ಲಿ ಶ್ರೀನಿವಾಸಪ್ರಸಾದ್'ಗೆ ಹೀನಾಯ ಸೋಲು; ಕಳಲೆ ಜಯಭೇರಿ

ಸಾರಾಂಶ

ಸಿದ್ದರಾಮಯ್ಯ ಮೇಲಿನ ಸಿಟ್ಟಿನಿಂದ ಅವರು ತೊರೆದುಬಂದಿದ್ದರಿಂದ ನಂಜನಗೂಡು ಚುನಾವಣೆಯು ಶ್ರೀನಿವಾಸಪ್ರಸಾದ್ ವರ್ಸಸ್ ಸಿದ್ದರಾಮಯ್ಯ ನಡುವಿನ ಫೈಟ್ ಎನಿಸಿತ್ತು. ಈಗ ಕಳಲೆ ಕೇಶವಮೂರ್ತಿ ಗೆಲುವು ಸಾಧಿಸಿರುವುದರೊಂದಿಗೆ ಕಾಂಗ್ರೆಸ್ ನಿಟ್ಟುಸಿರುಬಿಟ್ಟಿದೆ.

ಮೈಸೂರು(ಏ. 13): ನಂಜನಗೂಡು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಯ ವಿ.ಶ್ರೀನಿವಾಸಪ್ರಸಾದ್'ಗೆ ಮುಖಭಂಗವಾಗಿದೆ. ಕಾಂಗ್ರೆಸ್'ನ ಕಳಲೆ ಕೇಶವಮೂರ್ತಿ 21,334 ಮತಗಳ ಅಂತರದಿಂದ ಜಯಭೇರಿ ಭಾರಿಸಿದ್ದಾರೆ. ಕಳಲೆ 86,212 ಮತ ಪಡೆದರೆ, ಶ್ರೀನಿವಾಸಪ್ರಸಾದ್ 64,878 ಮತಗಳನ್ನು ಪಡೆದಿದ್ದಾರೆ.

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಮಾಜಿ ಸಚಿವ ವಿ.ಶ್ರೀನಿವಾಸಪ್ರಸಾದ್ ಅವರು ಎಂದಿಗೂ ಚುನಾವಣೆಯಲ್ಲಿ ಸೋಲನುಭವಿಸಿರಲಿಲ್ಲ. ಈ ಚುನಾವಣೆ ಅವರಿಗೆ ಬಹಳ ಪ್ರತಿಷ್ಠೆಯ ವಿಷಯವಾಗಿತ್ತು. ಮಾಜಿ ಸಚಿವರನ್ನು ಸೇರಿಸಿಕೊಂಡಿದ್ದ ಬಿಜೆಪಿಗೂ ಈ ಚುನಾವಣೆ ಪ್ರತಿಷ್ಠೆಯ ಪಣವಾಗಿತ್ತು. ಪಕ್ಷದ ರಾಜ್ಯಾಧ್ಯಕ್ಷ ಬಿಎಸ್'ವೈ ಅವರಿಗೂ ಇದು ಬಹಳ ಮಹತ್ವದ್ದಾಗಿತ್ತು.

ಸಿದ್ದರಾಮಯ್ಯ ಮೇಲಿನ ಸಿಟ್ಟಿನಿಂದ ಅವರು ತೊರೆದುಬಂದಿದ್ದರಿಂದ ನಂಜನಗೂಡು ಚುನಾವಣೆಯು ಶ್ರೀನಿವಾಸಪ್ರಸಾದ್ ವರ್ಸಸ್ ಸಿದ್ದರಾಮಯ್ಯ ನಡುವಿನ ಫೈಟ್ ಎನಿಸಿತ್ತು. ಈಗ ಕಳಲೆ ಕೇಶವಮೂರ್ತಿ ಗೆಲುವು ಸಾಧಿಸಿರುವುದರೊಂದಿಗೆ ಕಾಂಗ್ರೆಸ್ ನಿಟ್ಟುಸಿರುಬಿಟ್ಟಿದೆ.

ನಂಜನಗೂಡು: ಮತಗಳ ವಿವರ
ಕಾಂಗ್ರೆಸ್'ನ ಕಳಲೆ ಕೇಶವಮೂರ್ತಿ: 86,212
ಬಿಜೆಪಿಯ ಶ್ರೀನಿವಾಸಪ್ರಸಾದ್: 64,878
ನೋಟಾ: 1,665

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೆಂಪು, ನೀಲಿ, ಹಸಿರು, ಭಾರತೀಯ ರೈಲುಗಳ ಕಲರ್ ಕೋಡ್ ಬಗ್ಗೆ ನಿಮಗೆಷ್ಟು ಗೊತ್ತು?
ಅಜ್ಜ ಅಜ್ಜಿಯ ಮೊದಲ ಬಾರಿ ವಿಮಾನದಲ್ಲಿ ಕರೆದೊಯ್ದ ಮೊಮ್ಮಗ : ವೀಡಿಯೋ ಭಾರಿ ವೈರಲ್