ಗೃಹ ಸಚಿವರು ಸಿಡಿಸಿದರು ಹೊಸ ಬಾಂಬ್ !

Published : Mar 19, 2017, 07:33 AM ISTUpdated : Apr 11, 2018, 12:50 PM IST
ಗೃಹ ಸಚಿವರು ಸಿಡಿಸಿದರು ಹೊಸ ಬಾಂಬ್ !

ಸಾರಾಂಶ

ಇದೇ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​.ಯಡಿಯೂರಪ್ಪಾ ಕೂಡ ಪರಮೇಶ್ವರ್​ ಆ ರೀತಿ ಹೇಳಿವವರಲ್ಲ. ಯಾವ ಕಾರಣಕ್ಕೆ ಬರುತ್ತಾರೆ ಎಂಬುದನ್ನು ಅವರನ್ನೇ ಕೇಳಿಕೊಳ್ಳಿ ಎಂದರು.

ಮೈಸೂರು(ಮಾ.19): ನಂಜನಗೂಡು ಬೈಲ್​ ಎಲೆಕ್ಷನ್​ ಸಮರ ಜೋರಾಗತೊಡಗಿದ್ದು,ಆರೋಪ ಪ್ರತ್ಯಾರೋಪಗಳು ಜೋರಾಗಿಯೇ ನಡೆದಿವೆ. ಬಿಜೆಪಿಯ 25 ಶಾಸಕರು ಕಾಂಗ್ರೆಸ್​ ಸೇರಲಿದ್ದಾರೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೊಸ ಬಾಂಬ್ ಸಿಡಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್​ ಹೇಳಿಕೆಯನ್ನು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್​ ಪ್ರಸಾದ್​ ಲೇವಡಿ ಮಾಡಿದ್ದಾರೆ. ಹಿಂದೆ ರಾಜ್ಯದಲ್ಲಿ ದಲಿತ ಸಿಎಂ ಕೂಗು ಬಂದಾಗ ದಲಿತ ಸಿಎಂ ಮಾಡಲು ಹೊರಟ ಪರಮೇಶ್ವರ್​ ಜೊತೆಗೆ 5 ಜನ ಎಂಎಲ್​ಎ ಕರೆತರಲು ಆಗಲಿಲ್ಲ. ಈಗ 25 ಜನ ಬಿಜೆಪಿ ಶಾಸಕರನ್ನು ಕರೆತರ್ತಾನಾ ಅಂತ ಪ್ರಸಾದ್​ ಪರಮೇಶ್ವರ್​ ಅವರ ಹೇಳಿಕೆಯನ್ನು ಲೇವಡಿ ಮಾಡಿದ್ದಾರೆ. ಇದೇ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​.ಯಡಿಯೂರಪ್ಪಾ ಕೂಡ ಪರಮೇಶ್ವರ್​ ಆ ರೀತಿ ಹೇಳಿವವರಲ್ಲ. ಯಾವ ಕಾರಣಕ್ಕೆ ಬರುತ್ತಾರೆ ಎಂಬುದನ್ನು ಅವರನ್ನೇ ಕೇಳಿಕೊಳ್ಳಿ ಎಂದರು. ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜ್ಯದಲ್ಲಿ 20 ಲಕ್ಷ ಅಕ್ರಮ ವಲಸಿಗರು? ಪೊಲೀಸರ ಲೆಕ್ಕದಲ್ಲಿ ಕೇವಲ 485 ಮಂದಿ!
india Latest News Live: ನ್ಯಾಷನಲ್‌ ಹೆರಾಲ್ಡ್ ಕೇಸು: ಹೈಕೋರ್ಟ್‌ ಮೊರೆ ಹೋದ ಜಾರಿ ನಿರ್ದೇಶನಾಲಯ