
ಕೋಲ್ಕತ್ತಾ (ಏ.17): ನಾರದ ಕುಟುಕು ಕಾರ್ಯಾಚರಣೆ ಪ್ರಕರಣದ ಆರೋಪಿಗಳಾದ ತೃಣಮೂಲ ಕಾಂಗ್ರೆಸ್ ನಾಯಕರಾದ ಮುಕುಲ್ ರಾಯ್, ಸುಗತಾ ರಾಯ್ ಹಾಗೂ ಮದನ್ ಮಿತ್ರಾ ಸೇರಿದಂತೆ 13 ಮಂದಿಯ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿದೆ.
ನಾರದ ಸ್ಟಿಂಗ್ ಪ್ರಕರಣದ ಕುರಿತು ತನಿಖೆ ನಡೆಸುವಂತೆ ಸಿಬಿಐಗೆ ಸುಪ್ರೀಂಕೋರ್ಟ್ ಸೂಚಿಸಿದ್ದು, ಒಂದು ತಿಂಗಳ ಗಡುವು ಇಂದಿಗೆ ಮುಕ್ತಾಯವಾಗಿದೆ. ಈ ಪ್ರಕರಣದ ತನಿಖೆ ನಡೆಸಿದ ಬಳಿಕ ಭ್ರಷ್ಟಾಚಾರ ತಡೆ ಕಾಯ್ದೆ ಹಾಗೂ ಪಿತೂರಿ ಅಡಿಯಲ್ಲಿ ತೃಣಮೂಲ ಕಾಂಗ್ರೆಸ್ ಸಂಸದರ ಮೇಲೆ ಸಿಬಿಐ ಎಫ್ ಐಆರ್ ದಾಖಲಿಸಿದೆ.
ತೃಣಮೂಲ ಕಾಂಗ್ರೆಸ್ ನಾಯಕರು ತಮ್ಮ ಅಧಿಕಾರ ಬಳಸಿ ಹಣವನ್ನು ಸ್ವೀಕರಿಸಿರುವುದಕ್ಕೆ ಮೇಲ್ನೋಟಕ್ಕೆ ಸಾಕ್ಷಾಧಾರಗಳು ಲಭ್ಯವಾಗಿವೆ ಎಂದು ಸಿಬಿಐ ಹೇಳಿದೆ.
ಪಶ್ಚಿಮ ಬಂಗಾಳದಲ್ಲಿ 2016 ರ ವಿಧಾನಸಭಾ ಚುನಾವಣೆಗೂ ಮುನ್ನ ಟಿಎಂಸಿ ಮುಖಂಡರು ನೆರವು ನೀಡುತ್ತೇನೆಂದು ಹೇಳಿ ಹಣ ಸ್ವೀಕರಿಸಿರುವ ಬಗ್ಗೆ ಕುಟುಕು ಕಾರ್ಯಾಚರಣೆ (ಸ್ಟಿಂಗ್ ಆಪರೇಶನ್) ನಡೆಸಿದ ಬೇರೆ ಬೇರೆ ನ್ಯೂಸ್ ಏಜನ್ಸಿಗಳು ನಾರದ ಸ್ಟಿಂಗ್ ಟೇಪ್ ಗಳನ್ನು ಬಿಡುಗಡೆ ಮಾಡಿದ್ದವು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.