
ಮುಂಬೈ (ಡಿ.25): ಐಟಿ ಕಂಪನಿಗಳಲ್ಲಿ ಹಿರಿಯ ವ್ಯವಸ್ಥಾಪಕರು ತಮಗೆ ತಾವೇ ಭಾರೀ ಪ್ರಮಾಣದಲ್ಲಿ ವೇತನ ಏರಿಕೆ ಮಾಡಿಕೊಳ್ಳುವುದು ಸಮಂಜಸ ಅಲ್ಲ ಎಂದು ಇನ್ಫೋಸಿಸ್ ಸಹ ಸ್ಥಾಪಕ ನಾರಾಯಣ ಮೂರ್ತಿ ಸಲಹೆ ನೀಡಿದ್ದಾರೆ.
ಬಾಂಬೆ ಐಐಟಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾಫ್ಟವೇರ್ ಕಂಪನಿಗಳಲ್ಲಿ ಕಿರಿಯರು ಮತ್ತು ಹೊಸದಾಗಿ ಕೆಲಸಕ್ಕೆ ಸೇರಿದವರಿಗೆ ವೇತನ ಏರಿಕೆ ನಿರಾಕರಿಸುತ್ತಿರುವ ಬೆಳವಣಿಗೆ ಕಳವಳಕಾರಿ.
ಉನ್ನತ ಹುದ್ದೆಯಲ್ಲಿ ಇರುವವರು ಭಾರೀ ಮಟ್ಟದ ವೇತನ ಏರಿಕೆ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಈ ರೀತಿಯ ಬಂಡವಾಳ ಶಾಹಿತ್ವ ಒಪ್ಪತಕ್ಕದ್ದಲ್ಲ. ದೇಶದಲ್ಲಿ ಹೆಚ್ಚಿನ ಜನರು ಬಡತನ ಅನುಭವಿಸುತ್ತಿದ್ದಾರೆ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.