ರೈತರ ಸಮಸ್ಯೆಗೆ ಸ್ಪಂದಿಸಲು ಫೆ.19, 20ರಂದು ಮೋದಿ ಸಭೆ

Published : Feb 15, 2018, 09:41 AM ISTUpdated : Apr 11, 2018, 12:51 PM IST
ರೈತರ ಸಮಸ್ಯೆಗೆ ಸ್ಪಂದಿಸಲು ಫೆ.19, 20ರಂದು ಮೋದಿ ಸಭೆ

ಸಾರಾಂಶ

ಸಂಕಷ್ಟದಲ್ಲಿರುವ ಕೃಷಿಕರ ನೋವಿಗೆ ಸ್ಪಂದಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 19 ಹಾಗೂ 20ರಂದು ‘ರಾಷ್ಟ್ರೀಯ ಸಮ್ಮೇಳನ-2022’ ಹೆಸರಿನಲ್ಲಿ ಮಹತ್ವದ ಸಮಾಲೋಚನಾ ಸಭೆಯೊಂದನ್ನು ಆಯೋಜಿಸಿದ್ದಾರೆ

ನವದೆಹಲಿ : ಸಂಕಷ್ಟದಲ್ಲಿರುವ ಕೃಷಿಕರ ನೋವಿಗೆ ಸ್ಪಂದಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 19 ಹಾಗೂ 20ರಂದು ‘ರಾಷ್ಟ್ರೀಯ ಸಮ್ಮೇಳನ-2022’ ಹೆಸರಿನಲ್ಲಿ ಮಹತ್ವದ ಸಮಾಲೋಚನಾ ಸಭೆಯೊಂದನ್ನು ಆಯೋಜಿಸಿದ್ದಾರೆ.

ದಿಲ್ಲಿಯ ಪೂಸಾ ಸಂಕೀರ್ಣದಲ್ಲಿ ಸಭೆ ನಡೆಯಲಿದ್ದು, ಕೃಷಿ ಸಚಿವಾಲಯವು ಇದನ್ನು ಆಯೋಜಿಸಿದೆ. 2 ದಿವಸಗಳ ಈ ಸಮ್ಮೇಳನದಲ್ಲಿ ಪ್ರಧಾನಮಂತ್ರಿಗಳು ಫೆ.20ರಂದು ಪಾಲ್ಗೊಳ್ಳಲಿದ್ದಾರೆ.

ಕೃಷಿ ಸಚಿವ ರಾಧಾಮೋಹನ್‌ ಸಿಂಗ್‌, ಕೃಷಿ ತಜ್ಞರು, ನೀತಿ ಆಯೋಗದ ಹಿರಿಯ ಅಧಿಕಾರಿಗಳು, ಕೃಷಿ ಬೆಲೆ ಆಯೋಗದ ಅಧಿಕಾರಿಗಳು, ಕೃಷಿ ವಿಶ್ವವಿದ್ಯಾಲಯಗಳ ಮುಖ್ಯಸ್ಥರು, ರೈತರು ಹಾಗೂ ರೈತ ಸಂಘಟನೆಗಳ ಮುಖಂಡರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಮೊದಲ ದಿನದ ಸಭೆಯಲ್ಲಿ ಕೃಷಿಯಲ್ಲಿನ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಗುತ್ತಿದ್ದು, ಆ ದಿನದ ಚರ್ಚೆ ಆಧರಿಸಿ ವರದಿ ಸಿದ್ಧಪಡಿಸಲಾಗುತ್ತದೆ. ಮಾರನೆಯ ದಿನ ಪ್ರಧಾನಿಯವರಿಗೆ ವರದಿ ಸಲ್ಲಿಸಲಾಗುತ್ತದೆ. ಇದರಿಂದ ಪ್ರಧಾನಿಯವರಿಗೆ ಕೃಷಿ ನೀತಿ ರೂಪಿಸಲು ಅನುಕೂಲ ಮಾಡಿಕೊಡುವ ಉದ್ದೇಶ ಹೊಂದಲಾಗಿದೆ. ದೇಶದಲ್ಲಿ ರೈತರು ಅತೀವೃಷ್ಟಿ-ಅನಾವೃಷ್ಟಿಹಾಗೂ ಬೆಳೆ ಬಂದಿದ್ದರೂ ಬೆಲೆ ಕುಸಿತದ ಸಮಸ್ಯೆಯಿಂದ ನರಳುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಲವರ್ ಜೊತೆ ಸೇರಿ ಪತಿ ಹತ್ಯೆಗೈದು ದೇಹದ ಒಂದೊಂದು ಪೀಸ್ ಜಿಲ್ಲೆಯ ಪ್ರತಿ ಗಾಮದಲ್ಲಿ ಎಸೆದ ಪತ್ನಿ
ಗೋವಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿಗೆ ಕ್ಲೀನ್ ಸ್ವೀಪ್ ಗೆಲುವು, 10 ಸ್ಥಾನಕ್ಕೆ ತೃಪ್ತಿಪಟ್ಟ ಕಾಂಗ್ರೆಸ್