ರೈತರಿಗೆ ಮೋದಿ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

Published : Dec 24, 2018, 07:58 AM IST
ರೈತರಿಗೆ ಮೋದಿ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

ಸಾರಾಂಶ

ಮೋದಿ ಸರ್ಕಾರ ರೈತರಿಗೆ ಗುಡ್ ನ್ಯೂಸ್ ಒಂದನ್ನು ನೀಡುತ್ತಿದೆ. ಹಳೆಯ ವಿಮಾ ಯೋಜನೆಯೂ ಸೂಕ್ತ ಪ್ರಮಾಣದಲ್ಲಿ ಕಾರ್ಯ ನಿರ್ವಹಣೆಯಾಗದ ಕಾರಣ ಹೊಸ ರೀತಿಯಲ್ಲಿ ವಿಮಾ ಯೋಜನೆ ಜಾರಿಗೊಳಿಸಲು ಸಿದ್ಧತೆ ನಡೆಸಿದೆ. 

ನವದೆಹಲಿ: ರೈತರ ಉದ್ಧಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮಹತ್ವಾಕಾಂಕ್ಷೆಯೊಂದಿಗೆ 2016ರಲ್ಲಿ ಜಾರಿಗೆ ತಂದಿದ್ದ ‘ಪ್ರಧಾನಮಂತ್ರಿ ಫಸಲ್‌ ಬಿಮಾ ಯೋಜನೆ’ಯಿಂದ ವಿಮಾ ಕಂಪನಿಗಳು ಉದ್ಧಾರವಾಗುತ್ತಿರುವ ವರದಿಗಳು ಬಂದ ಹಿನ್ನೆಲೆಯಲ್ಲಿ ಯೋಜನೆಗೆ ಹೊಸ ರೂಪ ನೀಡಲು ಕೇಂದ್ರ ಸರ್ಕಾರ ಸಿದ್ಧತೆಯಲ್ಲಿ ತೊಡಗಿದೆ.

ಸ್ಪೇನ್‌ ಹಾಗೂ ಟರ್ಕಿ ದೇಶಗಳಲ್ಲಿರುವ ಕೃಷಿ ವಿಮೆ ಯೋಜನೆಯ ಮಾದರಿಯಲ್ಲೇ ಹೊಸ ಯೋಜನೆ ಇರಲಿದೆ. ಆ ಎರಡೂ ಯೋಜನೆಗಳ ಬಗ್ಗೆ ಕೇಂದ್ರ ಕೃಷಿ ಸಚಿವಾಲಯದ ಅಧಿಕಾರಿಗಳು ವಿಶ್ವ ಬ್ಯಾಂಕ್‌ ನೆರವಿನೊಂದಿಗೆ ಅಧ್ಯಯನ ಮಾಡಿ ಬಂದಿದ್ದು, ಅದನ್ನು ಭಾರತದಲ್ಲೂ ಅಳವಡಿಸುವ ಪ್ರಯತ್ನ ನಡೆಯುತ್ತಿದೆ. ಲೋಕಸಭೆ ಚುನಾವಣೆಗೂ ಮುನ್ನ ಹೊಸ ರೂಪದ ಕೃಷಿ ಬಿಮಾ ಯೋಜನೆ ಅನುಷ್ಠಾನಕ್ಕೆ ಬರಲಿದೆ ಎಂದು ಹೇಳಲಾಗುತ್ತಿದೆ.

ಹೊಸ ರೂಪದ ಕೃಷಿ ವಿಮಾ ಯೋಜನೆಯಲ್ಲಿ ವಿಮಾ ಕಂಪನಿಗಳ ಆಟಕ್ಕೆ ಬ್ರೇಕ್‌ ಬೀಳಲಿದೆ. ವಿಮಾ ಶುಲ್ಕ ನಿಗದಿಯಿಂದ ಹಿಡಿದು, ವಿಮಾ ಮೊತ್ತ ಪಾವತಿವರೆಗೆ ಎಲ್ಲ ಹೊಣೆಗಳನ್ನೂ ಸರ್ಕಾರವೇ ಹೊತ್ತುಕೊಳ್ಳುತ್ತದೆ. ಈ ಯೋಜನೆಯಲ್ಲಿ ವಿಮಾ ಕಂಪನಿಗಳೂ ಇರಲಿದ್ದು, ತಮ್ಮ ಅನುಭವ ಬಳಸಿ ಯೋಜನೆಯನ್ನು ಜಾರಿಗೆ ತರುತ್ತವೆ. ಅದಕ್ಕಾಗಿ ಸರ್ಕಾರ ವಿಮಾ ಕಂಪನಿಗಳಿಗೆ ನಿರ್ದಿಷ್ಟಶುಲ್ಕ ಪಾವತಿ ಮಾಡಲಿದೆ.

ಸದ್ಯ ಇರುವ ಯೋಜನೆಯಡಿ, ವಿಮಾ ಕಂಪನಿಗಳೇ ಎಲ್ಲ ಅಧಿಕಾರಗಳನ್ನೂ ನಿರ್ವಹಿಸುತ್ತಿದ್ದು, ತಮಗೆ ಲಾಭವಾಗುವ ರೀತಿ ಯೋಜನೆಯನ್ನು ಜಾರಿಗೆ ತರುತ್ತಿವೆ ಎಂಬ ಆರೋಪವಿದೆ. ಇತ್ತೀಚೆಗೆ ನಡೆದ ಪಂಚರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆ ಆಗಿದ್ದಕ್ಕೆ ಕೃಷಿ ಸಮಸ್ಯೆಯೂ ಕಾರಣ ಎಬ ವಿಶ್ಲೇಷಣೆಗಳಿವೆ. ಲೋಕಸಭೆ ಚುನಾವಣೆ ಸಂದರ್ಭದಲ್ಲೂ ಆ ವಿಷಯ ಸದ್ದು ಮಾಡಬಹುದು ಎಂಬ ಕಾರಣಕ್ಕೆ ವಿಮಾ ಯೋಜನೆಗೆ ಹೊಸ ರೂಪ ನೀಡಲು ಸರ್ಕಾರ ಮುಂದಾಗಿದೆ ಎಂದು ವರದಿಗಳು ತಿಳಿಸಿವೆ.

ಯಾಕೆ ಈ ಚಿಂತನೆ?

ಹಾಲಿ ಫಸಲ್‌ ಬಿಮಾ ಯೋಜನೆಯನ್ನು ವಿಮಾ ಕಂಪನಿಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ಜಾರಿಗೊಳಿಸುತ್ತಿವೆ. ಇದರಿಂದ ರೈತರಿಗೆ ಸೂಕ್ತ ಬೆಳೆ ನಷ್ಟಪರಿಹಾರ ಸಿಗುತ್ತಿಲ್ಲ ಎಂಬ ಆರೋಪವಿದೆ. ಈ ಹಿನ್ನೆಲೆಯಲ್ಲಿ ಸರ್ಕಾರವೇ ನೇರವಾಗಿ ವಿಮಾ ಶುಲ್ಕ ನಿಗದಿ, ಪರಿಹಾರ ಪಾವತಿ ನಿರ್ವಹಿಸಲು ಚಿಂತನೆ ನಡೆಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
ಅನುದಾನ ಬೇಕಾದ್ರೆ ನಾಟಿ ಕೋಳಿ ಅಡುಗೆ ಮಾಡಬೇಕಾ? ರಾಜ್ಯ ಸರ್ಕಾರಕ್ಕೆ ಸಿ.ಟಿ.ರವಿ ಪ್ರಶ್ನೆ