
ಮೈಸೂರು [ಜೂ.22]: ಪ್ರಧಾನಿ ಮೋದಿ ಒಂದು ಬಾರಿಯಲ್ಲ ಮೂರು ಬಾರಿ ಗೆದ್ದರೆ ಮಾತ್ರ ಭಾರತಕ್ಕೆ ಉಳಿಗಾಲ ಎಂದು ಸರಸ್ವತಿ ಸನ್ಮಾನ್ ಪುರಸ್ಕೃತ ಸಾಹಿತಿ ಎಸ್.ಎಲ್. ಭೈರಪ್ಪ ತಿಳಿಸಿದ್ದಾರೆ.
ಮೈಸೂರಿನ ಕುವೆಂಪು ನಗರದ ತಮ್ಮ ನಿವಾಸದಲ್ಲಿ ಶುಕ್ರವಾರ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು ನಾಲ್ಕು ವರ್ಷಗಳಲ್ಲಿ ಭಾರತವನ್ನ ಉತ್ತಮವಾಗಿ ಅಭಿವೃದ್ಧಿ ಪಡಿಸಿದ್ದಾರೆ. ಮುಂದಿನ ಭವಿಷ್ಯ ಭಾರತವನ್ನ ಕಟ್ಟಲು ಶ್ರಮಿಸಿದ್ದಾರೆ. ಎರಡು ಮೂರು ಬಣಗಳು ಸೇರಿ ಮೋದಿ ಸೋಲಿಸಲು ಪಣ ತೊಟ್ಟಿವೆ.
ಮೋದಿಯನ್ನ ಸೋಲಿಸಿದರೆ ನಮ್ಮ ಮೂರ್ಖತನದ ಪರಮಾವಧಿ. ನಮ್ಮ ಶತ್ರು ರಾಷ್ಟ್ರಗಳಾದ ಚೀನಾ ಮತ್ತು ಪಾಕಿಸ್ತಾನ ಸುತ್ತಮುತ್ತಲಿನ ರಾಷ್ಟ್ರಗಳ ಪ್ರೀತಿ ವಿಶ್ವಾಸ ಗಳಿಸಲು ಯಶಸ್ವಿಯಾಗಿದ್ದಾರೆ ಎಂದು ಮೋದಿ ವಿರೋಧಿಗಳನ್ನು ತರಾಟೆಗೆ ತೆಗೆದುಕೊಂಡರು.
ಮೋದಿಯನ್ನ ದ್ವೇಷ ಮಾಡುವ ಬದಲು ಅವರ ಕೆಲಸವನ್ನು ಪ್ರೀತಿಸಿ. ಹಿಂದೆ ಇದ್ದ ಯುಪಿಎ ಸರ್ಕಾರ ಏನು ಸಾಧನೆ ಮಾಡಿತು ಎನ್ನುವುದು ಎಲ್ಲರಿಗೂ ಗೊತ್ತಿದೆ. ಯಾವುದೇ ಒಂದು ಕೆಲಸ ಮಾಡಲು ಮೇಡಂ ಅಂತಾ ಅವರ ಹಿಂದೆ ಹೋಗ್ತಿದ್ರಿ. ಇಂಥವರು ಬೇಕಾ ಅಥವಾ ದೇಶದ ಅಭಿವೃದ್ಧಿ ಮಾಡುವವರು ಬೇಕಾ? ಎಂದು ಪ್ರಶ್ನಿಸಿದರು.
ಇದೇ ಸಂದರ್ಭದಲ್ಲಿ ಸಂಸದ ಪ್ರತಾಪ್ ಸಿಂಹ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಹಾಗೂ ಮೈಸೂರಿನ ಅಭಿವೃದ್ಧಿ ಯೋಜನೆಗಳ ಬಗ್ಗೆ ಮಾತುಕತೆ ನಡೆಸಿ ಕೇಂದ್ರದ ನಾಲ್ಕು ವರ್ಷದ ಯಶಸ್ವಿ ಯೋಜನೆಗಳ ಕೈಪಿಡಿ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.