
ಸಿಂಗಾಪುರ: ಬ್ಯಾಂಕ್ ಖಾತೆಯೇ ಹೊಂದಿಲ್ಲದ ಕೋಟ್ಯಂತರ ಜನರನ್ನು ಬ್ಯಾಂಕಿಂಗ್ ಜಾಲಕ್ಕೆ ಸೇರ್ಪಡೆಗೊಳಿಸಲು ‘ಜನಧನ’ ಅನುಷ್ಠಾನಗೊಳಿಸಿ ಯಶಸ್ವಿಯಾಗಿರುವ ಪ್ರಧಾನಿ ನರೇಂದ್ರ ಮೋದಿ ಇದೀಗ ಅಂತಹುದೇ ವಿಶ್ವವ್ಯಾಪಿಗೆ ಯೋಜನೆಗೆ ಬುಧವಾರ ಚಾಲನೆ ನೀಡಲಿದ್ದಾರೆ.
ಬ್ಯಾಂಕ್ಗಳಿಂದ ದೂರವೇ ಉಳಿದಿರುವ ಭಾರತ ಸೇರಿದಂತೆ 23 ದೇಶಗಳ 200 ಕೋಟಿ ಜನರನ್ನು ಬ್ಯಾಂಕಿಂಗ್ ವಲಯದ ವ್ಯಾಪ್ತಿಗೆ ತರುವ ತಂತ್ರಜ್ಞಾನ ಆಧರಿತ ಯೋಜನೆಯನ್ನು ಸಿಂಗಾಪುರದಲ್ಲಿ ಉದ್ಘಾಟಿಸಲಿದ್ದಾರೆ. ಬರೋಬ್ಬರಿ 30 ಸಾವಿರ ಜನರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಬುಧವಾರ ಹಾಗೂ ಗುರುವಾರ ಸಿಂಗಾಪುರ ಪ್ರವಾಸ ಕೈಗೊಳ್ಳುತ್ತಿರುವ ಮೋದಿ ಅವರು, ಹಣಕಾಸು ಸೇವೆಗೆ ಸಂಬಂಧಿದ ತಂತ್ರಜ್ಞಾನ ಕಂಪನಿಗಳ ಸಮ್ಮೇಳನ ‘ಫಿನ್ಟೆಕ್’ನಲ್ಲಿ ಪಾಲ್ಗೊಳ್ಳಲಿದ್ದಾರೆ. ಬ್ಯಾಂಕ್ ಖಾತೆ ಹೊಂದಿಲ್ಲದ ಜನರಿಗಾಗಿ ‘ಎಪಿಕ್ಸ್’ ಎಂಬ ಬ್ಯಾಂಕಿಂಗ್ ತಂತ್ರಜ್ಞಾನವನ್ನು ಬಿಡುಗಡೆ ಮಾಡಲಿದ್ದಾರೆ.
ಬೋಸ್ಟನ್ನಲ್ಲಿ ಕೇಂದ್ರ ಕಚೇರಿ ಹೊಂದಿರುವ ವರ್ಚುಸಾ ಎಂಬ ಕಂಪನಿ ‘ಎಪಿಕ್ಸ್’ ತಂತ್ರಜ್ಞಾನ ರೂಪಿಸಿದ್ದು, ಹೈದರಾಬಾದ್, ಕೊಲಂಬೋ ಹಾಗೂ ಲಂಡನ್ನ ಸಾಫ್ಟ್ವೇರ್ ಪರಿಣತರು ಇದನ್ನು ವಿನ್ಯಾಸಗೊಳಿಸಿದ್ದಾರೆ.
ಮೋದಿ ಭಾಗವಹಿಸುವ ಕಾರ್ಯಕ್ರಮದಲ್ಲಿ 30 ಸಾವಿರ ಮಂದಿ ಪಾಲ್ಗೊಳ್ಳಲಿದ್ದು, ಇದು ವಿಶ್ವದಲ್ಲೇ ಬೃಹತ್ ಸಮಾರಂಭ ಎನಿಸಿಕೊಳ್ಳಲಿದೆ. ಇದೇ ವೇಳೆ ವಿವಿಧ ಸಭೆಗಳಲ್ಲಿ ಮೋದಿ ಅವರು ಪಾಲ್ಗೊಳ್ಳಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ