
ಕಾಠ್ಮಂಡು: ನೇಪಾಳದ ಜನಕಪುರದ ಜಾನಕಿ ದೇವಸ್ಥಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಮೇ 11ಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆ, ಪ್ರಾಂತ್ಯ ನಂ.2ರಲ್ಲಿ ಸಾರ್ವಜನಿಕ ರಜೆ ಘೋಷಿಸಲಾಗಿದೆ. ನೇಪಾಳ ಪ್ರಾಂತ್ಯ ನಂ. 2ರ ಎಲ್ಲ 8 ಜಿಲ್ಲೆಗಳಿಂದ 50,000 ಮಂದಿ ಬರ್ಹಾಬಿಗಾ ಮೈದಾನದಲ್ಲಿ ಮೋದಿಯವರ ಸನ್ಮಾನದಲ್ಲಿ ಭಾಗಿಯಾಗಲಿದ್ದಾರೆ.
ಹೀಗಾಗಿ ಇಲ್ಲಿ ಸರ್ಕಾರಿ ರಜೆ ಘೋಷಿಸಲಾಗಿದೆ. ಭಾರತದ ಗಡಿಗೆ ಪಕ್ಕದಲ್ಲಿರುವ ಜನಕಪುರದಲ್ಲಿ ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಭಾರೀ ಭದ್ರತೆ ಏರ್ಪಡಿಸಲಾಗಿದೆ. ಪಟನಾದಿಂದ ಜನಕಪುರಕ್ಕೆ, ಅಲ್ಲಿಂದ ಮಸ್ತಂಗ್ ಮತ್ತು ಕಠ್ಮಂಡುಗೆ ಅವರು ಭೇಟಿ ನೀಡಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.