
ಉತ್ತರ್ ಖಂಡ್(ಅ.29): ಪ್ರಧಾನಿ ನರೇಂದ್ರ ಮೋದಿ ಈ ಬಾರಿ ದೀಪಾವಳಿಯನ್ನು ಭಾರತ-ಚೀನಾ ಗಡಿಯಲ್ಲಿ ಯೋಧರೊಂದಿಗೆ ಆಚರಿಸಲಿದ್ದಾರೆ.
ಉತ್ತರಾಖಂಡ್ನ ಭಾರತ-ಚೀನಾ ಗಡಿಯಲ್ಲಿ ಭದ್ರತೆಗೆ ನಿಯೋಜನೆಗೊಂಡಿರುವ ಇಂಡೋ-ಟಿಬೆಟ್ ಬಾರ್ಡರ್ಪೊಲೀಸರ ಜೊತೆ ಪ್ರಧಾನಿ ಬೆಳಕಿನ ಹಬ್ಬವನ್ನು ಆಚರಿಸಲಿದ್ದಾರೆ.
ಇಂದು ದೆಹಲಿಯಿಂದ ಉತ್ತರ್ ಖಂಡ್ ನ ಚಮೇಲಿಯಲ್ಲಿರುವ ಬದ್ರಿನಾಥಕ್ಕೆ ತೆರಳಲಿರುವ ಮೋದಿ ಬದ್ರಿನಾಥನ ಮಂದಿರದಲ್ಲಿ ಪೂಜೆ ಸಲ್ಲಿಸಲಿದ್ದಾರೆ.
ಆ ಬಳಿಕ ಮನಾಗೆ ತೆರಳಿ ಐಟಿಬಿಪಿ ಯೋಧರೊಂದಿಗೆ ದೀಪಾವಳಿ ಆಚರಿಸಲಿದ್ದಾರೆ. ಪ್ರಧಾನಿ ಮೋದಿಗೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಸಾಥ್ ನೀಡಲಿದ್ದಾರೆ.
ಪ್ರಧಾನಿ ಮೋದಿ The #Sandesh2Soldiers ಎಂಬ ಹೆಸರಿನಲ್ಲಿ ಆಂದೋಲನ ಆರಂಭಿಸಿದ್ದು, ಹಬ್ಬದ ಸಮಯದಲ್ಲೂ ತಮ್ಮವರನ್ನೆಲ್ಲಾ ಬಿಟ್ಟು ಗಡಿಯಲ್ಲಿ ದೇಶ ಕಾಯುವ ಯೋಧರಿಗೆ ಹಬ್ಬದ ಶುಭಾಶಯ ತಿಳಿಸಲು ದೇಶದ ಜನತೆಗೆ ಕರೆ ಕೊಟ್ಟಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.