
ನವದೆಹಲಿ(ಸೆ.27): 2 ದಿನ 6 ಸಾವಿರ ಕ್ಯೂಸೆಕ್ ನೀರು ಬಿಡಲು ಸುಪ್ರೀಂ ಆದೇಶ ನೀಡುತ್ತಿದ್ದಂತೆ ರಾಜ್ಯದ ಪರ ವಕೀಲ ಫಾಲಿ ನಾರಿಮನ್ ಮತ್ತೆ ವಾದಕ್ಕೆ ನಿಂತಿದ್ದಾರೆ. ತಮಿಳುನಾಡಿಗೆ ಮತ್ತೆ ನೀರು ಬಿಡಲು ಸಾಧ್ಯವೇ ಇಲ್ಲ, ನಿಮ್ಮ ಆದೇಶವನ್ನ ಪಾಲಿಸಲು ಸಾಧ್ಯವಿಲ್ಲ. ನಮ್ಮ ಬಳಿ ಇರುವುದು ಕುಡಿಯುವ ನೀರು ಮಾತ್ರ ಎಂದು ವಾದ ಮಂಡಿಸಿದ್ಧಾರೆ.
ಇದಕ್ಕೂ ಮುನ್ನ, ಕುಡಿಯುವ ನೀರಿಗಾಗಿ ಜಲಾಶಯಗಳ ನೀರನ್ನ uಳಿಸಿಕೊಳ್ಳುವ ವಿಧಾನಸಭೆ ನಿರ್ಣಯ ಸುಪ್ರೀಂಕೋರ್ಟ್ ಆದೇಶ ಅನುಷ್ಠಾನಕ್ಕೆ ಅಡ್ಡಿ ಬರುವುದಿಲ್ಲ, ವಿಧಾನಸಭೆ ನಿರ್ಣಯ ಪ್ರತ್ಯೇಕವಾದಂತಹ ವಿಷಯ, ಸಂವಿಧಾನದ ಯಾವ ಕಲಂ ಆಧಾರದ ಮೇಲೆ ವಿಧಾನಸಭೆ ನಿರ್ಣಯ ತೆಗೆದುಕೊಂಡಿದೆ? ಎಂದು ರಾಜ್ಯದ ಪರ ವಕೀಲ ನಾರಿಮನ್ ಅವರನ್ನು ಸುಪ್ರೀಂಕೋರ್ಟ್ ಪ್ರಶ್ನಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.