
ನವದೆಹಲಿ(ಅ.04): ನಿನ್ನೆ ಕರ್ನಾಟಕದ ಪರ ವಾದ ಮಾಡುವುದಿಲ್ಲ ಎಂದು ಹೇಳಿದ್ದ ವಕೀಲ ಫಾಲಿ ನಾರಿಮನ್ ಇವತ್ತು ಸುಪ್ರೀಂಕೋರ್ಟ್`ನಲ್ಲಿ ಖಡಕ್ ವಾದ ಮಂಡಿಸಿದ್ದಾರೆ. ವಾಸ್ತವ ಸ್ಥಿತಿಯನ್ನ ಅರಿತು ಆದೇಶವನ್ನ ಕೊಡಬೇಕಿತ್ತು. ಕೇವಲ ಲೆಕ್ಕಾಚಾರದಿಂದ ಆದೇಶ ನೀಡುವುದು ಸರಿಯಲ್ಲ. ಈಗಾಗಲೇ, ಕರ್ನಾಟಕದ ರಾಜಕಾರಣಿಗಳಿಂ ಟೀಕೆಗಳನ್ನ ಅನುಭವಿಸಿದ್ದೇನೆ. ಇನ್ಮುಂದೆ ಇಂತಹ ಆದೇಶ ನೀಡಬೇಡಿ ಎಂದು ನಾರಿಮನ್ ಕೋರ್ಟ್ ಮುಂದೆ ಮನವಿ ಮಾಡಿದ್ದಾರೆ
ಇದೇವೇಳೆ, ಈ ಹಿಂದೆ ನೀಡಿದ್ದ ಆದೇಶವನ್ನ ಪಾಲಿಸುತ್ತೇವೆ ಎಂದು ಫಾಲಿ ನಾರಿಮನ್, ಈಗಾಗಲೇ 9 ಸಾವಿರ ಕ್ಯೂಸೆಕ್ ನೀರು ಬಿಟ್ಟಿದ್ದೇವೆ, ಇನ್ನುಳಿದ 24 ಸಾವಿರ ಕ್ಯೂಸೆಕ್ ನೀರು ಬಿಡುತ್ತೇವೆ ಎಂದು ತಿಳಿಸಿದರು.
ಎಜಿಯಿಂದಲೂ ಖಡಕ್ ವಾದ: ಇದಕ್ಕೂ ಮುನ್ನ ಕಾವೇರಿ ನಿರ್ವಹಣಾ ಮಂಡಳಿ ರಚನೆ ಆದೇಶ ಹಿಂಪಡೆಯುವಂತೆ ವಾದ ಮಂಡಿಸಿದ ಅಟಾರ್ನಿ ಜನರಲ್ ಮುಕುಲ್ ರೋಹ್ಟಗಿ, ಕಾವೇರಿ ನಿರ್ವಹಣಾ ಮಂಡಳಿ ರಚನೆ ಅಧಿಕಾರ ಸಂಸತ್ತಿಗಿದೆ. ಮಂಡಳಿ ರಚಿಸುವಂತೆ ಆದೇಶಿಸುವ ಅಧಿಕಾರ ಸುಪ್ರೀಂಕೋರ್ಟ್ಗೆ ಇಲ್ಲ. ಸೆ.30ರ ಆದೇಶ ಹಿಂಪಡೆಯಿರಿ ಎಂದು ವಾದಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.