
ನವದೆಹಲಿ(ಡಿ.7): ದಕ್ಷಿಣದ ರಾಜ್ಯಗಳಲ್ಲಿ ಅನಾಹುತ ಸೃಷ್ಟಿಸಿದ ಬಳಿಕ ಮಹಾರಾಷ್ಟ್ರ ಮತ್ತು ಗುಜರಾತ್ ಮಾರ್ಗವಾಗಿ ಚಲಿಸಿದ ಓಖಿ ಚಂಡಮಾರುತ ಉತ್ತರಭಾರತದ ರಾಜ್ಯಗಳಿಗೆ ವರವಾಗುವ ಸಾಧ್ಯತೆ ಇದೆ. ದೆಹಲಿ, ಉತ್ತರ ಭಾರತ ರಾಜ್ಯ ಆವರಿಸಿರುವ ವಾಯುಮಾಲಿನ್ಯ ನಿವಾರಿಸುವಲ್ಲಿ ಓಖಿ ಚಂಡ ಮಾರುತ ಮಹತ್ವದ ಪಾತ್ರ ವಹಿಸುವ ಸಾಧ್ಯತೆ ಇದೆ.
ಓಖಿ ಚಂಡಮಾರುತ ಸಾಗುತ್ತಿರುವ ಚಿತ್ರವನ್ನು ನಾಸಾ ಬಿಡುಗಡೆ ಮಾಡಿದೆ. ಅದರನ್ವಯ, ಓಕಿ ಗುಜರಾತ್’ನಿಂದ ದೆಹಲಿಯತ್ತ ಮುಖ ಮಾಡಿದ್ದು, ಚಂಡಮಾರುತದ ಅಬ್ಬರಕ್ಕೆ ವಾಯು ಮಾಲಿನ್ಯವೂ ಕೊಚ್ಚಿಹೋಗಬಹುದು ಎಂದು ನಾಸಾ ಹೇಳಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.